Breaking News

ಗ್ರಾಮೀಣ ಭಾಗದ ಕೃಷಿ ಸಖಿಯರಿಗೆ – ನೈಸರ್ಗಿಕ ಕೃಷಿ ಕಲಿಕೆ. ಗಂಗಾವತಿ: ಕೃಷಿ ಹಾಗೂ ಕುಟುಂಬ ಕಲ್ಯಾಣ ಮಂತ್ರಾಲಯ,

ನವದೆಹಲಿ ,ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣೆಯ ಸಂಸ್ಥೆ, ಹೈದರಾಬಾದ್, ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಇವರ ಸಹಯೋಗದೊಂದಿಗೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಂಚಾಯತಿಯಿಗೆ ಒಬ್ಬರಂತೆ ಇರುವ ಕೃಷಿ ಸಖಿಯರಿಗೆ ಐದು ದಿನಗಳ ಕಾಲ ನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮವನ್ನು ಕೆ.ವಿ.ಕೆಯ ಗೃಹ ವಿಜ್ಞಾನಿಗಳಾದ ಡಾ.ಕವಿತಾ, ಕಾಮನೂರ ಗ್ರಾಮದ ಪ್ರಗತಿಪರ ರೈತರಾದ ಶ್ರೀಬಸಪ್ಪ ವಂಕಲಕುಂಟ ಇವರು ಉದ್ಘಾಟಿಸಿದರು.
ಡಾ.ಕವಿತಾ, ಗೃಹ ವಿಜ್ಞಾನಿ, ಕೆ.ವಿ.ಕೆ, ಗಂಗಾವತಿ ಇವರ ಹೇಳಿಕೆ .


ರೈತರಿಗೆ ಕೃಷಿ ತಾಂತ್ರಿಕತೆಗಳನ್ನು ವರ್ಗಾವಣೆ ಮಾಡುವಲ್ಲಿ ಕೃಷಿ ಸಖಿಯಾರ ಪಾತ್ರ ಬಹಳ ಮುಖ್ಯವಾದುದು, ಕೃಷಿ ಸಖಿಯರು ವಿವಿಧ ಋತುವಿನಲ್ಲಿ ಬೆಳೆಯುವ ಬೆಳೆಗಳಿಗೆ ಸೂಕ್ತ ಮಾಹಿತಿಯನ್ನು ತಿಳಿಸಬೇಕು. ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ಸೇವೆಯನ್ನು ಒದಗಿಸಬೇಕೆಂದು ತಿಳಿಸಿದರು. ನೈಸರ್ಗಿಕ ಕೃಷಿ ಪರಿಕರಗಳ ತಯಾರಿಕೆಯ ಪ್ರಾತಿಕ್ಷ್ಯತೆಯ ಹಾಗೂ ಅವುಗಳ ಮಹತ್ವ ಮಣ್ಣಿನಲ್ಲಿ

ಪೋಷಕಾಂಶಗಳು, ಸಾವಯವ ಪರಿಕರಗಳು, ಪೌಷ್ಟಿಕ ತೋಟ , ಹೈನು ದನಗಳ ಪೋಷಣೆ, ನೈಸರ್ಗಿಕ ಕೃಷಿಯಲ್ಲಿ ತೋಟಗಾರಿಕೆ ಹಾಗೂ ಪ್ರಗತಿಪರ ರೈತರ ಅನುಭವ ಹಂಚಿಕೆ ಈ ತರಬೇತಿಯ ವಿಶೇಷ.
ಈ ಸಂದರ್ಭದಲ್ಲಿ ಕೆ.ವಿ.ಕೆ ವಿಜ್ಞಾನಿಗಳು, ಗಂಗಾವತಿ ಕಾರಟಗಿ, ಕನಕಗಿರಿ ತಾಲೂಕಿನ ಕೃಷಿ ಸಖಿಯರು, ಸಂಜೀವಿನಿ ಕೃಷಿ ತಾಲೂಕು ವ್ಯವಸ್ಥಾಪಕರಾದ ಮುದ್ದಾಣೇಶ ಇವರು ಉಪಸ್ಥಿತರಿದ್ದರು.

About Mallikarjun

Check Also

ಲಿಂಗಾಯತ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಗಂಗಾವತಿ,: ಇಂದು ದಿನಾಂಕ 30/6/2024 ರಂದು ನಗರದ ಶ್ರೀ ಚನ್ನಮಲ್ಲಿಕಾರ್ಜುನ ಮಠದ ಆವರಣದಲ್ಲಿ ವೀರಶೈವ ಲಿಂಗಾಯತ ನೌಕರ ಸಂಘದ ವತಿಯಿಂದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.