Breaking News

ಗ್ರಾಮೀಣ ಭಾಗದ ಕೃಷಿ ಸಖಿಯರಿಗೆ – ನೈಸರ್ಗಿಕ ಕೃಷಿ ಕಲಿಕೆ. ಗಂಗಾವತಿ: ಕೃಷಿ ಹಾಗೂ ಕುಟುಂಬ ಕಲ್ಯಾಣ ಮಂತ್ರಾಲಯ,

IMG 20240624 WA0172 300x169

ನವದೆಹಲಿ ,ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣೆಯ ಸಂಸ್ಥೆ, ಹೈದರಾಬಾದ್, ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಇವರ ಸಹಯೋಗದೊಂದಿಗೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಂಚಾಯತಿಯಿಗೆ ಒಬ್ಬರಂತೆ ಇರುವ ಕೃಷಿ ಸಖಿಯರಿಗೆ ಐದು ದಿನಗಳ ಕಾಲ ನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮವನ್ನು ಕೆ.ವಿ.ಕೆಯ ಗೃಹ ವಿಜ್ಞಾನಿಗಳಾದ ಡಾ.ಕವಿತಾ, ಕಾಮನೂರ ಗ್ರಾಮದ ಪ್ರಗತಿಪರ ರೈತರಾದ ಶ್ರೀಬಸಪ್ಪ ವಂಕಲಕುಂಟ ಇವರು ಉದ್ಘಾಟಿಸಿದರು.
ಡಾ.ಕವಿತಾ, ಗೃಹ ವಿಜ್ಞಾನಿ, ಕೆ.ವಿ.ಕೆ, ಗಂಗಾವತಿ ಇವರ ಹೇಳಿಕೆ .

ಜಾಹೀರಾತು
IMG 20240624 WA0173 1024x576


ರೈತರಿಗೆ ಕೃಷಿ ತಾಂತ್ರಿಕತೆಗಳನ್ನು ವರ್ಗಾವಣೆ ಮಾಡುವಲ್ಲಿ ಕೃಷಿ ಸಖಿಯಾರ ಪಾತ್ರ ಬಹಳ ಮುಖ್ಯವಾದುದು, ಕೃಷಿ ಸಖಿಯರು ವಿವಿಧ ಋತುವಿನಲ್ಲಿ ಬೆಳೆಯುವ ಬೆಳೆಗಳಿಗೆ ಸೂಕ್ತ ಮಾಹಿತಿಯನ್ನು ತಿಳಿಸಬೇಕು. ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ಸೇವೆಯನ್ನು ಒದಗಿಸಬೇಕೆಂದು ತಿಳಿಸಿದರು. ನೈಸರ್ಗಿಕ ಕೃಷಿ ಪರಿಕರಗಳ ತಯಾರಿಕೆಯ ಪ್ರಾತಿಕ್ಷ್ಯತೆಯ ಹಾಗೂ ಅವುಗಳ ಮಹತ್ವ ಮಣ್ಣಿನಲ್ಲಿ

IMG 20240624 WA0174 1024x576

ಪೋಷಕಾಂಶಗಳು, ಸಾವಯವ ಪರಿಕರಗಳು, ಪೌಷ್ಟಿಕ ತೋಟ , ಹೈನು ದನಗಳ ಪೋಷಣೆ, ನೈಸರ್ಗಿಕ ಕೃಷಿಯಲ್ಲಿ ತೋಟಗಾರಿಕೆ ಹಾಗೂ ಪ್ರಗತಿಪರ ರೈತರ ಅನುಭವ ಹಂಚಿಕೆ ಈ ತರಬೇತಿಯ ವಿಶೇಷ.
ಈ ಸಂದರ್ಭದಲ್ಲಿ ಕೆ.ವಿ.ಕೆ ವಿಜ್ಞಾನಿಗಳು, ಗಂಗಾವತಿ ಕಾರಟಗಿ, ಕನಕಗಿರಿ ತಾಲೂಕಿನ ಕೃಷಿ ಸಖಿಯರು, ಸಂಜೀವಿನಿ ಕೃಷಿ ತಾಲೂಕು ವ್ಯವಸ್ಥಾಪಕರಾದ ಮುದ್ದಾಣೇಶ ಇವರು ಉಪಸ್ಥಿತರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.