ಮಾದಕ ವ್ಯಸನದಿಂದ ದೂರವಿರಿ: ಪಿಎಸ್ಐ ವಿಜಯ್ ಪ್ರತಾಪ್

ವರದಿ : ಪಂಚಯ್ಯ ಹಿರೇಮಠ,,,,

ಕೊಪ್ಪಳ : (ಯಲಬುರ್ಗಾ) – ಯುವಕರು ತಮ್ಮ ಕಲಿಯುವ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯ ಹಾಗೂ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಪಿಎಸ್ಐ ವಿಜಯ್ ಪ್ರತಾಪ್ ಹೇಳಿದರು.

ಪಟ್ಟಣದ ಶ್ರೀ ಮಂಜುನಾಥ ಪಿಯುಸಿ ಕಾಲೇಜಿನಲ್ಲಿ ಪೋಲಿಸ್ ಇಲಾಖೆಯಿಂದ ಹಮ್ಮಿಕೊಂಡ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೂನ್ 26ನೇ ದಿನವನ್ನು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತಿದೆ ಆದ್ದರಿಂದ ಮಾದಕ ವ್ಯಸನದಿಂದ ಮನುಷ್ಯನ ಜೀವನದಲ್ಲಿ ನಡೆಯುವ ದುರ್ಘಟನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೂ ಸಹ ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಹಾಗೂ ಮನುಷ್ಯ ಜೀವನದಲ್ಲಿ ಒಂದು ಸಾರಿ ಮಾದಕತೆಗೆ ಅಂಟಿಕೊಂಡರೆ ಅವರ ಜೀವನವೆ ನಾಶವಾಗುವದು ಎಂದರು.

ಪೋಲಿಸ್ ಸಿಬ್ಬಂದಿ ಬಾಳನಗೌಡ ಪಾಟೀಲ ಮಾತನಾಡಿ ಮಾದಕ ವ್ಯಸನದ ಬಗ್ಗೆ ನಮ್ಮ ಪಿಎಸ್ಐ ಸಾಹೇಬರು ಎಲ್ಲಾ ಮಕ್ಕಳಿಗೆ ಮನಮುಟ್ಟುವಂತೆ ಮಾದಕ ವ್ಯಸನದಿಂದ ಉಂಟಾಗುವ ಕೆಟ್ಟ ಪರಿಣಾಮದ ಬಗ್ಗೆ ತಿಳಿಸಿದ್ದಾರೆ ಅದರಂತೆ ಎಲ್ಲಾ ಯುವಕರು ಎಚ್ಚರಿಕೆಯಿಂದ ಜೀವನ ಸಾಗಿಸಿ ಮತ್ತು ನೀವು ವಾಸಿಸುವ ಪ್ರದೇಶ ಅಥವಾ ಗ್ರಾಮಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ಕಂಡುಬಂದಲ್ಲಿ ತಕ್ಷಣ 112 ನಂಬರಿಗೆ ಕರೆ ಮಾಡಿ ಹಾಗೂ ಕರೆ ಉಚಿತವಾಗಿರುತ್ತದೆ ಮತ್ತು ನಿಮ್ಮ ಹೆಸರನ್ನು ಗೌಪ್ಯವಾಗಿ ಇಡಲಾಗುವದು ಸಮಾಜದಲ್ಲಿರುವ ಹಲವಾರು ಸಮಸ್ಯಗಳ ಪರಿಹಾರಕ್ಕೆ ಯುವಕರು ಕೈಜೋಡಿಸಬೇಕು ಇದರಿಂದ ಸಮಾಜದ ಹಲವಾರು ಕೆಟ್ಟ ಪಿಡುಗುಗಳನ್ನ ಹೊಡೆದುಹಾಕಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷ ಶೇಖರಗೌಡ ಉಳಾಗಡ್ಡಿ ವಹಿಸಿದ್ದರು. ಹಾಗೂ ಖಜಾಂಚಿಯಾದ ಶರಣಪ್ಪ ಗಾಂಜಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಬಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago