ಬೆಂಗಳೂರು ಸುತ್ತಮುತ್ತ ಮತ್ತೊಂದು ಏರ್ಪೋರ್ಟ್ ಸ್ಥಾಪನೆಗೆ ಮೆಗಾ ಪ್ಲಾನ್
ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ
ದೆಹಲಿ, ಗೋವಾ, ಮುಂಬೈ ಮಾದರಿಯಲ್ಲಿ ಮತ್ತೊಂದು ಏರ್ಪೋರ್ಟ್!
ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಸಿಲಿಕಾನ್ ಸಿಟಿ ಬೆಳೆಯುತ್ತಿರುವ ವೇಗಕ್ಕೆ ಸಾಥ್ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ.
ಬೆಂಗಳೂರಿಗೆ ಮತ್ತೊಂದು ಏರ್ಪೋರ್ಟ್ ನಿರ್ಮಾಣದ ಸುದ್ದಿ ಹೊರ ಬಂದ ಬಳಿಕ ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಸಿಎಂ ಎಂ.ಕೆ ಸ್ಟಾಲಿನ್ ಅವರು ಬೆಂಗಳೂರಿನ ಗಡಿಭಾಗವಾದ ತಮಿಳುನಾಡಿನ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಗಡಿಭಾಗದಲ್ಲಿ ವರ್ಷಕ್ಕೆ 3 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಏರ್ಪೋರ್ಟ್ ನಿರ್ಮಾಣ ಮಾಡಲಾಗುತ್ತದೆ. ತಮಿಳುನಾಡು ವಿಧಾನಸಭೆಯಲ್ಲಿ ಇಂದು 2 ಸಾವಿರ ಎಕರೆ ಜಾಗದಲ್ಲಿ ಏರ್ಪೋರ್ಟ್ ನಿರ್ಮಾಣ ಮಾಡುವ ಘೋಷಣೆಯನ್ನು ಸಿಎಂ ಎಂ.ಕೆ ಸ್ಟಾಲಿನ್ ಅವರು ಮಾಡಿದ್ದಾರೆ.
ಎಂ.ಕೆ ಸ್ಟಾಲಿನ್ ಹೇಳಿದ್ದೇನು?
ಇತ್ತೀಚೆಗೆ ಹೊಸೂರಿಗೆ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುತ್ತಿದೆ. ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯಗಳ ಅಭಿವೃದ್ದಿಗೆ ವಿವಿಧ ಯೋಜನೆಯನ್ನು ಜಾರಿ ಮಾಡಿದ್ದೇವೆ. ಹೊಸೂರು ಜಿಲ್ಲೆಯನ್ನು ಪ್ರಮುಖ ಆರ್ಥಿಕ ಸೆಂಟರ್ ಆಗಿ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ, ಆರ್ಥಿಕ ಅಭಿವೃದ್ದಿಯ ಉತ್ತೇಜನಕ್ಕೆ ಹೊಸೂರಿನಲ್ಲಿ ಏರ್ಪೋರ್ಟ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಹೊಸೂರು, ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಅಭಿವೃದ್ಧಿಗೆ ಏರ್ ಪೋರ್ಟ್ ಸಹಕಾರಿಯಾಗಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಏರ್ಪೋರ್ಟ್ಗೆ ಅನುಮತಿ ಸಿಗುತ್ತಾ?
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ನಡುವೆ ಒಂದು ಷರತ್ತಿನ ಒಪ್ಪಂದ ಆಗಿದೆ. ಮುಂದಿನ 25 ವರ್ಷಗಳ ಕಾಲ ಬೆಂಗಳೂರು ಏರ್ಪೋರ್ಟ್ನಿಂದ 150 ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಏರ್ಪೋರ್ಟ್ಗೆ ಅನುಮತಿ ನೀಡಬಾರದು. ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ನ ಒಪ್ಪಂದವು 2033ಕ್ಕೆ ಪೂರ್ಣವಾಗುತ್ತಿದೆ.
ಕರ್ನಾಟಕ ಸರ್ಕಾರದಿಂದಲೂ ಸಿದ್ಧತೆ!
ಮತ್ತೊಂದೆಡೆ ಕರ್ನಾಟಕ ಸರ್ಕಾರದಿಂದಲೂ ಬೆಂಗಳೂರು ಸುತ್ತಮುತ್ತ ಮತ್ತೊಂದು ಏರ್ಪೋರ್ಟ್ ಸ್ಥಾಪನೆಗೆ ಸ್ಥಳ ಹುಡುಕಾಟ ನಡೆಸಿದೆ. ಏರ್ಪೋರ್ಟ್ ನಿರ್ಮಾಣಕ್ಕೆ ಕನಿಷ್ಠ 8ರಿಂದ 10 ವರ್ಷಗಳೇ ಬೇಕಾಗುತ್ತೆ. ಹೀಗಾಗಿ ಈಗಿನಿಂದಲೇ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಪ್ಲಾನ್ ಮಾಡುತ್ತಿದೆ.
ಇದನ್ನೂ ಓದಿ: UNESCO- ವಿಶ್ವದ ಅತ್ಯಂತ ಸುಂದರ ಏರ್ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಇತ್ತೀಚೆಗೆ ಬೆಂಗಳೂರಿಗೆ ದೆಹಲಿ, ಗೋವಾ, ಮುಂಬೈ ಮಾದರಿಯಲ್ಲಿ ಮತ್ತೊಂದು ಏರ್ ಪೋರ್ಟ್ ನಿರ್ಮಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದರು. ಇದೀಗ ಬೆಂಗಳೂರು ಗಡಿಯ ತಮಿಳುನಾಡಿನ ಹೊಸೂರಿನಲ್ಲಿ ಏರ್ಪೋರ್ಟ್ ನಿರ್ಮಾಣದ ಘೋಷಣೆ ಮಾಡಿರೋದು ಕುತೂಹಲಕ್ಕೆ ಕಾರಣವಾಗಿದೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…