Breaking News

ಯಶಸ್ವಿಯಾಗಿ ನಡೆದ ರೈತರ ಕುಂದು ಕೊರತೆಗಳ ಸಭೆ .

Successful meeting of farmers.

ಜಾಹೀರಾತು


ವರದಿ : ಬಂಗಾರಪ್ಪ .ಸಿ
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರಿಗಿರುವಂತಹ ಹಲವಾರು ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ತಿಳಿಸಿದರು..

ಹನೂರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ರೈತರ ಕುಂದು ಕೊರತೆ ನಿವಾರಣೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ನಮ್ಮ
ತಾಲೂಕಿನಲ್ಲಿರುವ ವಿವಿಧ ಇಲಾಖಗಳಲ್ಲಿ ಸಮಸ್ಯೆಗಳಿದ್ದಲ್ಲಿ ಅಂತಹ ಸಮಸ್ಯೆಗಳನ್ನು ರೈತರು ಅಧಿಕಾರಿಗಳ ಜೊತೆಯಲ್ಲಿ ನೆರವಾಗಿ ಆಗಮಿಸಿ ಮುಕ್ತವಾಗಿ ಚರ್ಚಿಸಲು ಅವಕಾಶವಿದ್ದು ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಲ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ರೈತರು ಮಾತನಾಡಿ ಹನೂರು ತಾಲೂಕಿನ ಉದ್ದಗಲಕ್ಕು ರಸ್ತೆ ತುಂಬಾ ಅವ್ಯವಸ್ಥೆಯಾಗಿದೆ ಗುಂಡಿ ಮಯವಾಗಿದೆ ಜೊತೆಗೆ ನಾಲ್ ರೋಡು ರಾಮಾಪುರ ರಸ್ತೆ ಗುದ್ದಲಿ ಪೂಜೆ ಮಾಡಿದರು ಸಹ ಕಾಮಗಾರಿ ಪ್ರಾರಂಭವಾಗಿಲ್ಲ ಈಗಾಗಿ ತುಂಬಾ ತೊಂದರೆಯಾಗಿದೆ ಎಂದು ದೂರಿದರು.ಜೊತೆಗೆ ಮುಖ್ಯವಾಗಿ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ ಇದರಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಬೇಕು ಅಲ್ಲದೇ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಜೊತೆಗೆ ರೈತರಿಗೆ ಬರ ಪರಿಹಾರದ ಹಣ ಬರುತ್ತಿಲ್ಲ ಹಾಗಾಗಿ ಆದಷ್ಟು ಬೇಗ ಈ ಬಗ್ಗೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಕೃಷಿ ಇಲಾಖೆಯಲ್ಲಿ ಅನೇಕ ಕಾರ್ಯಕ್ರಮಗಳಿದ್ದು ಅದರ ಪ್ರಯೋಜನ ರೈತರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ ಇದರಿಂದ ಸರಿಯಾದ ಮಾಹಿತಿ ನೀಡಿ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಬಾಲ್ಯ ವಿವಾಹ ನಿಲ್ಲಿಸಿ : ತಾಲೂಕಿನಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದೂ ಸಾಧ್ಯವಾದಷ್ಟು ಎಲ್ಲರೂ ಸೇರಿ ಬಾಲ್ಯ ವಿವಾಹ ನಿಲ್ಲಿಸುವ ಪ್ರಯತ್ನ ಮಾಡೋಣ ಎಂದು ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮನವಿ ಮಾತನಾಡಿದರು.

ತೋಟಗಾರಿಕೆ ಇಲಾಖೆಯ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಿ : ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಅನೇಕ ರೀತಿಯಲ್ಲಿ ಕಾರ್ಯಕ್ರಮಗಳಿದ್ದು ಇದು ನಮ್ಮ ರೈತರಿಗೆ ಸರಿಯಾದ ಮಾಹಿತಿ ಇಲ್ಲ ಮಾಹಿತಿ ಕೊರತೆಯಿಂದಾಗಿ ನಮ್ಮ ರೈತರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ತೋಟಗಾರಿಕೆಯ ಇಲಾಖೆಯಲ್ಲಿ ರೈತರಿಗೆ ಇರುವ ಕಾರ್ಯಕ್ರಮಗಳ ಬಗ್ಗೆ ತರಬೇತಿ ನೀಡಿ ಎಂದು ಮನವಿ ಮಾಡಿದರು.

ಆಂಬುಲೆನ್ಸ್ ನೀಡಿ : ಹನೂರು ತಾಲೂಕಿನಲ್ಲಿ ಕೇವಲ 3 ಆಂಬುಲೆನ್ಸ್ ಗಳು ಕೆಲಸ ಮಾಡುತ್ತಿದ್ದೂ ಅದರಲ್ಲೂ ಕೇವಲ 2 ಆಂಬುಲೆನ್ಸ್ ಗಳು ಮಾತ್ರ ಕೆಲಸ ನಿರ್ವಹಿಸುತ್ತಿದ್ದು ಉಳಿದಂತೆ ವಿವಿದೆಡೆ ಆಂಬುಲೆನ್ಸ್ ಗಳ ಕೊರೆತೆ ಎದ್ದು ಕಾಡುತ್ತಿದೆ ಹಾಗಾಗಿ ಆಂಬುಲೆನ್ಸ್ ಗಳ ಕೊರತೆ ನೀಗಿಸಬೇಕು ಆಸ್ಪತ್ರೆಗಳಲ್ಲಿ ವೈದ್ಯರು ಉಳಿದು ಚಿಕಿತ್ಸೆ ನೀಡುವಂತಾಗಬೇಕು ಎಂದು ರೈತರು ಆಗ್ರಹ ಮಾಡಿದರು.

ಅಲ್ಲದೇ ತಾಲೂಕಿನಲ್ಲಿ ಕೆಲವೆಡೆ ಶಾಲಾ ಶಿಕ್ಷಕರು ಸಮಯಕ್ಕೆ ಮುಂಚಿತವಾಗಿ ಶಾಲೆ ಬಿಟ್ಟು ಬರುತ್ತಿದ್ದಾರೆ ಹಾಗಾಗಿ ಅಂತಹ ಕಡೆ ನಿಗಾ ವಹಿಸಿ ಜೊತೆಗೆ ಅಂಗನವಾಡಿ ಕೇಂದ್ರಗಳಲ್ಲಿ ಹುಳು ಮಿಶ್ರಿತ ಆಹಾರ ಕೊಡುತ್ತಿದ್ದೂ ಅದರ ಬಗ್ಗೆ ಸಂಬಂಧ ಪಟ್ಟವರು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೃಹಲಕ್ಷ್ಮಿ ಆತಂಕ ಬಿಡಿ : ಹನೂರು ತಾಲೂಕಿನಲ್ಲಿ 46146 ಫಲಾನುಭವಿಗಳು ಈಗಾಗಲೇ ನೋಂದಣಿ ಮಾಡಿದ್ದು ಅವರಿಗೆ ಗೃಹಲಕ್ಷ್ಮಿ ಹಣ ತಲುಪುತ್ತಿದೆ ಉಳಿದಂತೆ 300 ಜನ ಫಲಾನುಭವಿಗಳಿಗೆ ನಾನಾ ಕಾರಣಗಳಿಂದ ತಲುಪಿಲ್ಲ ಅವರಿಗೆ ಈಗಾಗಲೇ ಕರೆ ಮಾಡಿ ತಿಳಿಸಿದ್ದು ಕೆ ವೈ ಸಿ ಮಾಡಿಸಲು ತಿಳಿಸಲಾಗಿದೆ.ಜೊತೆಗೆ ಮುಖ್ಯವಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿಡಿಪಿಒ ನಂಜಮಣಿ ಹೇಳಿದರು.

ಇದೆ ಸಂದರ್ಭದಲ್ಲಿ ಅಧಿಕಾರಿಗಳಾದ ತಹಸೀಲ್ದಾರ್ ವೈ ಕೆ ಗುರುಪ್ರಸಾದ್, ತಾಲೋಕು ಪಂಚಾಯಿತಿ ಇ ಒ ಉಮೇಶ್, ಸಿ ಡಿ ಪಿ ಒ ನಂಜಮಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದ್ರಮ್ಮ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ವಿನುತಾ, ತಾಲೂಕು ವೈದ್ಯಾಧಿಕಾರಿ ಡಾ ಪ್ರಕಾಶ್,ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಹನೂರು ತಾಲೂಕಿನ ರೈತ ಸಂಘಟನೆಯ ಮುಖಂಡರು ಹಾಗೂ ರೈತರು ಹಾಜರಿದ್ದರು .

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.