ಬೆಂಗಳೂರು, ಜೂ, 30; ಎಪಿಎಸ್ ಶೈಕ್ಷಣಿಕ ಟ್ರಸ್ಟ್ ನ ಎನ್.ಆರ್. ಕಾಲೋನಿಯ ಆಚಾರ್ಯ ಪಾಠಶಾಲಾ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ಸಂಸ್ಥೆಯ ಉತ್ಸಾಹಭರಿತ ಸಮ್ಮಿಲನ ಆಯೋಜಿಸಲಾಗಿತ್ತು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸಿ.ಎ.ವಿಷ್ಣು ಭರತ್ ಆಲಂಪಳ್ಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.
ವಾರಾಂತ್ಯದಲ್ಲಿ ಶಿಕ್ಷಣ ಕೇಂದ್ರ ಉತ್ಸಾಹದ ಕೇಂದ್ರವಾಗಿ ಮಾರ್ಪಟ್ಟಿತ್ತು. ಈ ಕಾರ್ನೀವಲ್ ಕಿರಿಯರಿಂದ ಹಿರಿಯ ನಾಗರಿಕವರೆಗೆ ಎಲ್ಲರಿಗೂ ಮೋಜಿನ ವೇದಿಕೆಯಾಗಿತ್ತು. ಸ್ವಚ್ಛ ಮತ್ತು ಸುಂದರ ಮಳಿಗೆಗಳಲ್ಲಿ ರೋಮಾಂಚಕ ಆಟಗಳು, ಸಮ್ಮೋಹನಗೊಳಿಸುವ ಸಂಗೀತ, ಆಕರ್ಷಕ ನೃತ್ಯ ಪ್ರದರ್ಶನಗಳು, ಮನಸೂರೆಗೊಳ್ಳುವ ನಾಟಕಗಳು ಮತ್ತು ರುಚಿಕರವಾದ ತಿಂಡಿ – ತಿನಿಸುಗಳು ಗಮನ ಸೆಳೆದವು. ಅತ್ಯಾಕರ್ಷಕ ಅದೃಷ್ಟದ ಲಾಟರಿ ಡ್ರಾಗಳಲ್ಲಿ ಬಹುಮಾನ ಗೆದ್ದು ಬೀಗಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಂದ ಉತ್ಸಾಹದ ಸಮ್ಮಿಲನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸೃಜನಶೀಲತೆ ಮತ್ತು ಸಮುದಾಯ ಮನೋಭಾವದ ಆಚರಣೆ ಜೊತೆಗೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…