Breaking News

ಗಂಗಾವತಿ ಪ್ರಗತಿಪರ ನಾಗರಿಕ ವೇದಿಕೆಯ ಪೂರ್ವಭಾವಿ ಸಭೆನಗರದ ಪ್ರಮುಖ ರಸ್ತೆಗಳ ಸುಧಾರಣೆ ಬಗ್ಗೆ ಚರ್ಚೆ

A preliminary meeting of the Gangavati Progressive Civic Forum discussed the improvement of major roads in the city

ಗಂಗಾವತಿ: ಗಂಗಾವತಿ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸದೇ ಇರುವುದನ್ನು ವಿರೋಧಿಸಿ, ಗಂಗಾವತಿ ಪ್ರಗತಿಪರ ನಾಗರಿಕ ವೇದಿಕೆ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ದಿನಾಂಕ: ೦೩.೦೭.೨೦೨೪ ಬುಧವಾರ ಬೆಳಿಗ್ಗೆ ೧೧:೦೦ ಗಂಟೆಗೆ ಪೂರ್ವಭಾವಿಯಾಗಿ ಸಭೆಯನ್ನು ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದ ಪ್ಲಾಟ್ ನಂ: ೧೧೧, ಕ್ರಾಂತಿಕೇAದ್ರ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ವೇದಿಕೆಯ ಪ್ರಧಾನ ಸಂಚಾಲಕರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಭೆಯಲ್ಲಿ ಗಂಗಾವತಿಯ ರಸ್ತೆಗಳು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಯು ಗಂಗಾವತಿ ನಗರದ ಸಿ.ಹೆಚ್. ನಾರಿನಾಳರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜೋಗದ ನಾರಾಯಣಪ್ಪ ನಾಯಕ, ಕೆ. ಕಾಳಪ್ಪ, ಶಂಕರಗೌಡ ಹೊಸಳ್ಳಿ ಪಾಲ್ಗೊಳ್ಳಲಿದ್ದಾರೆ. ಕಾರಣ ಈ ಸಭೆಯಲ್ಲಿ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಅಂಗ ಸಂಸ್ಥೆಗಳು ಹಾಗೂ ಸಿ.ಪಿ.ಎಂ ಪಕ್ಷದ ಅಂಗಸAಸ್ಥೆಗಳು, ಡಿ.ಎಸ್.ಎಸ್ ಸಂಘಟನೆಯ ಮುಖಂಡರು, ಕಾರ್ಮಿಕರು, ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

About Mallikarjun

Check Also

ಆಶಾಕಾರ್ಯಕರ್ತೆಯರ  ಪ್ರಥಮ  ಸಮ್ಮೇಳನ:

 ಗಂಗಾವತಿ: ನಗರದಲ್ಲಿ  ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.