ಕಲ್ಯಾಣಸಿರಿ ವಿಶೇಷ

ವಿಜಯನಗರ ಕಾಲುವೆಗಳ ಆಧುನಿಕರಣ ಕಾಮಗಾರಿಗೆ ಮಾಜಿ ಶಾಸಕ ಪರಣ್ಣ ಮುನುವಳ್ಳಿ ಪರಿಶೀಲನೆ

Former MLA Paranna Munuvalli inspected the modernization work of Vijayanagara canals

ಗಂಗಾವತಿ: ವಿಜಯನಗರ ಕಾಲುವೆ ಗಳ ಆಧುನಿಕರಣ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಎಸ್ ಬಿಎಚ್ (ಎಡಿಬಿ) ಅನುದಾನದಲ್ಲಿ 2019 ರಲ್ಲಿ ವಿಜಯನಗರ ಕಾಲುವೆಗಳನ್ನು ಅಭಿವೃದ್ಧಿಪಡಿಸಬೇಕು, ರೈತರಿಗೆ ಸಹಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಈ ಹಿಂದೆ ನಾನು ಶಾಸಕನಾಗಿದ್ದಾಗ ನಮ್ಮ ಬಿಜೆಪಿ ಸರ್ಕಾರ  ಇದನ್ನು ಘೋಷಣೆ ಮಾಡಿತ್ತು. ಈ ಕಾಮಗಾರಿಯನ್ನು ಟೆಂಡರ್ ಮೂಲಕ ಆರ್.ಎನ್.ಶೆಟ್ಟಿ ಅವರಿಗೆ ನೀಡಲಾಗಿದೆ, ಈ ಕಾಮಗಾರಿಯಲ್ಲಿ ಸಾಣಪುರದಿಂದ ಹಿಡಿದು ಸಂಗಾಪುರದವರೆಗೆ ಒಟ್ಟು ಕಾಮಗಾರಿ 19.5 ಕಿಲೋಮೀಟರ್ ಗಳ ವರೆಗೆ ಇದ್ದು, ಸುಮಾರು 3800 ಎಕರೆ ರೈತರು ಇದನ್ನು ಬಳಕೆ ಮಾಡಿಕೊಳ್ಳುತ್ತಾರೆ, ಈ ಕಾಮಗಾರಿ 2019 ರಿಂದ ಪ್ರಾರಂಭ ಗೊಳ್ಳಬೇಕಾಗಿತ್ತು, ಆದರೆ ಅನಿರೀಕ್ಷಿತವಾಗಿ ಕರೋನ ಸಾಂಕ್ರಾಮಿಕ ರೋಗ ಉಲ್ಬಣಗೊಂಡಿದ್ದರಿಂದ, ಎರಡು ವರ್ಷಗಳ ಕಾಲ ಕಾಲುವೆಯ ಕಾಮಗಾರಿ ನೆನೆಗುದಿಗೆ ಬಿದ್ದು, ಕಳೆದ ಸಾಲಿನಿಂದ ಕೆಲಸ ಪ್ರಾರಂಭವಾಗಿದೆ. ಆದರೆ, ಇದುವರೆಗೂ ಕಾಮಗಾರಿ ಕುದುರೆ ಓಟದಲ್ಲಿ ಇರಬೇಕಾದದ್ದು ಆಮೆಗತಿಯಲ್ಲಿ ಸಾಗುತ್ತಿದೆ. ಈಗಾಗಲೇ ಮಾರ್ಚ್ ತಿಂಗಳಿಗೆ ಈ ಕಾಮಗಾರಿ ಅಂತ್ಯಗೊಳ್ಳಬೇಕಾಗಿತ್ತು, ಆದರೆ ಸರ್ಕಾರ ಸೆಪ್ಟೆಂಬರ್ 31ರವರೆಗೆ ಮುಗಿಸಿಕೊಡಲು ಮುಂದುವರಿಸಿದ್ದಾರೆ. ಆದರೆ ಕಾಮಗಾರಿ ತ್ವರಿತಗತಿಯಲ್ಲಿ ಆಗಬೇಕಾಗಿದೆ, ಏಕೆಂದರೆ ಮುಂದಿನ ತಿಂಗಳು ರೈತರಿಗೆ ನೀರು ಬಿಡಲು ತಯಾರು ನಡೆಸುತ್ತಿದ್ದು, ಕಾಮಗಾರಿ  ವಿಳಂಬದಿಂದ ರೈತರ ಫಸಲು ಬೆಳೆಯಲು ತೊಂದರೆಯಾಗುವ ಲಕ್ಷಣಗಳು ಕಾಣುತ್ತಿದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ಇಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಚ್.ಎಂ.ಸಿದ್ದರಾಮಯ್ಯ ಸ್ವಾಮಿ ಇವರ ಜೊತೆಗೂಡಿ ವಿಜಯನಗರ  ಕಾಲುವೆಗಳ ಆಧುನಿಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾದ ಸಂಗಾಪುರ, ಮಲ್ಲಾಪುರ, ಆನೆಗೊಂದಿ, ಬಂಡೆಬಸಪ್ಪ ಕ್ಯಾಂಪ್ ಭಾಗಗಳಲ್ಲಿ ವೀಕ್ಷಿಸಿ ಇಷ್ಟೊತ್ತಿಗಾಗಲೇ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿಯಬೇಕಾಗಿತ್ತು.ಗುತ್ತಿಗೆದಾರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಈ ದೊಡ್ಡ ಮಟ್ಟದ ಕಾಮಗಾರಿ ನನ್ನ ಅವಧಿಯಲ್ಲಿ ಪ್ರಾರಂಭವಾಗಿತ್ತು ಎಂದು ನೆನಪಿಸಿದರು. 

     ಈ ಸಂದರ್ಭದಲ್ಲಿ.ಸಿದ್ದರಾಮಯ್ಯ ಸ್ವಾಮಿ, ರೈತ ಮುಖಂಡರಾದ ಭತ್ತದ ಚಂದ್ರಶೇಖರ್,ಲಿಂಗಪ್ಪ ಜನಾದ್ರಿ, ಮಣಿ, ಯಮನೂರಪ್ಪ, ಎಚ್. ಎಮ್.ವೀರಭದ್ರಯ್ಯ ಸ್ವಾಮಿ, ಲೋಕೇಶ್, ನಾಗೇಶ್, ಹಿರಿಯ ಅಭಿಯಂತರ ಅಮರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago