ಕಲ್ಯಾಣಸಿರಿ ವಿಶೇಷ

ಉಪಚುನಾವಣೆಗಳ ಸನಿಹದಲ್ಲೇ ಕಾಂಗ್ರೆಸ್‌ಗೆ ಮುಜುಗರವನ್ನುಂಟುಮಾಡಿದ ಇಡಿ ದಾಳಿ

The ED attack embarrassed the Congress just before the by-elections

ಬೆಂಗಳೂರು,ಜು.೧೦- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ರ‍್ಗಾವಣೆ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಮೇಲೆ ಜಾರಿ ನರ‍್ದೇಶನಾಲಯದ ದಾಳಿ ಕಾಂಗ್ರೆಸ್‌‍ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ಉಪಚುನಾವಣೆಗಳ ಸಂರ‍್ಭದಲ್ಲೇ ಇಕ್ಕಟ್ಟಿನ ವಾತಾವರಣ ನರ‍್ಮಿಸಿದೆ.ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮರೆಯಲ್ಲಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿಯಲು ಭಾರಿ ಸಂಚು ನಡೆದಿತ್ತು. ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರ ಆತಹತ್ಯೆಯಿಂದಾಗಿ ಇಡೀ ಪ್ರಕರಣ ಬೆಳಕಿಗೆ ಬಂದಿದ್ದು, ರ‍್ಕಾರದ ಘಟಾನುಘಟಿಗಳ ಬುಡ ಅಲುಗಾಡುವಂತೆ ಮಾಡಿದೆ.ನಾಗೇಂದ್ರ ಅವರು ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿದೆ. ಆದರೂ ಹಗರಣದಲ್ಲಿ ಅವರನ್ನು ಪ್ರಮುಖ ಪಾತ್ರಧಾರಿ ಎಂದು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ. ಸಚಿವರ ಮೌಖಿಕ ಆದೇಶದ ಮೇಲೆ ಹಣ ರ‍್ಗಾವಣೆ ಮಾಡಲಾಯಿತು ಎಂದು ಆತಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ನಮೂದು ಮಾಡಿದ್ದಾರೆ.

ನಾಗೇಂದ್ರ ಅವರು ರಾಜೀನಾಮೆ ನೀಡಿದ ಬಳಿಕ ಇತ್ತೀಚಿನವರೆಗೂ ಅವರನ್ನು ವಿಚಾರಣೆಗೊಳಪಡಿಸುವ ಧರ‍್ಯವನ್ನು ಎಸ್‌‍ಐಟಿ ಮಾಡಿರಲಿಲ್ಲ. ನಿಗಮದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಚಿವಾಲಯದ ಅಧಿಕಾರಿಗಳು ಹಾಗೂ ನಾಗೇಂದ್ರ ಅವರ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಿದ ಮೇಲೆ ಸಚಿವರ ಮೌಖಿಕ ಆದೇಶದ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿದುಬಂದಿದೆ.

ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಆಡಳಿತ ಪಕ್ಷದ ಶಾಸಕನನ್ನೇ ಬಂಧಿಸಿದರೆ ಅದು ಬೇರೆ ರೀತಿಯ ಸಂದೇಶ ಹೋಗಬಹುದು ಎಂಬ ಕಾರಣಕ್ಕೆ ಈವರೆಗೂ ತನಿಖೆಯ ನೆಪದಲ್ಲಿ ಕಾಲಾಹರಣ ನಡೆದಿತ್ತು ಎಂದು ತಿಳಿದುಬಂದಿದೆ.

ಈಗ ಇಡಿ ದಾಳಿಯಿಂದಾಗಿ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಂತಾಗಿದೆ. ಇಡಿ ಅಧಿಕಾರಿಗಳು ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸವರಾಜ ದದ್ದಲ್‌ ಅವರನ್ನು ಬಂಧಿಸಿದರೆ ಅದು ಕಾಂಗ್ರೆಸ್‌‍ ಪಕ್ಷಕ್ಕೆ ಭಾರಿ ಮುಜುಗರ ಉಂಟುಮಾಡಿದಂತಾಗುತ್ತದೆ. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವುದಂತೂ ನಿಜ ಎಂದು ಖುದ್ದು ನಾಗೇಂದ್ರ ಸೇರಿದಂತೆ ಗೃಹಸಚಿವ ಪರಮೇಶ್ವರ್‌ ಆದಿಯಾಗಿ ಎಲ್ಲರೂ ಒಪ್ಪಿಕೊಂಡಿದ್ದಾರೆ.ಅಕ್ರಮಗಳು ನಡೆದಿವೆ ಎಂಬ ಕಾರಣಕ್ಕಾಗಿಯೇ ಖುದ್ದು ಮುಖ್ಯಮಂತ್ರಿಯವರೇ ತನಿಖೆಗೆ ವಿಶೇಷ ದಳ ರಚಿಸಿದ್ದಾರೆ. ತನಿಖೆ ನಡೆಯುತ್ತಲೇ ಇದೆ. ಆದರೆ ಅಧಿಕಾರಿಗಳನ್ನು ಹೊರತುಪಡಿಸಿ ಹಗರಣದ ಮೂಲಕ್ಕೆ ಈವರೆಗೂ ಅಧಿಕಾರಿಗಳು ಕೈ ಇಟ್ಟಿರಲಿಲ್ಲ.

ಎಸ್‌‍ಐಟಿಗಿಂತಲೂ ಮೊದಲೇ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದರೆ ಕಾಂಗ್ರೆಸ್‌‍ ಪಕ್ಷಕ್ಕೆ ತೀವ್ರ ಮುಜುಗರವಾಗುವುದಷ್ಟೇ ಅಲ್ಲ, ರ‍್ಕಾರಕ್ಕೂ ಹಿನ್ನಡೆಯಾದಂತಾಗುತ್ತದೆ. ಹಾಗೆಂದು ಎಸ್‌‍ಐಟಿ ಅಧಿಕಾರಿಗಳೂ ಕೂಡ ನಾಗೇಂದ್ರ ಅವರನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ.ಒಟ್ಟಾರೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಕಾಂಗ್ರೆಸ್‌‍ ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago