ವರದಿ : ಬಂಗಾರಪ್ಪ .ಸಿ .
ಹನೂರು : ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳನ್ನು ಪಡೆದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮಹರಾಜರಾದ ಶ್ರೀ ಯದುವೀರ ಕ್ರಿಷ್ಣ ದತ್ತ ಚಾಮರಾಜ ವಡೆಯರ್ ರವರನ್ನು ಬೇಟಿಯಾಗಿ ಪಕ್ಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಚಾಮರಾಜನಗರ ಜಿಲ್ಲೆಯ ಬಿಜೆಪಿಯ ಚಾಮರಾಜನಗರ ಜಿಲ್ಲಾ ಪ್ರಮುಖರಾದ ಡಾಕ್ಟರ್ ದತ್ತೇಶ್ ಕುಮಾರ್ ತಿಳಿಸಿದರು .
ಮೈಸೂರಿನಲ್ಲಿ ಬೇಟಿ ಮಾಡಿದ ನಂತರ ಮಾತನಾಡಿದ ಅವರು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಆಡಳಿತವನ್ನು ಮೆಚ್ಚಿ ಮೂರನೆ ಭಾರಿಗೆ ಅವಕಾಶವನ್ನು ಮತದಾರರು ನೀಡಿದ್ದಾರೆ ಮುಂದಿನ ದಿನಗಳಲ್ಲಿ ಪ್ರಪಂಚದಲ್ಲಿ ನಮ್ಮ ದೇಶದಲ್ಲಿ ಉತ್ತಮ ಆಡಳಿತವನ್ನು ಕೊಡಲಾಗುತ್ತದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಪ್ರೊಪೇಷರ್ ಕೆ ಎಸ್ ರಂಗನಾಥ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು ಸಂಸದರನ್ನು ಬೇಟಿ ಮಾಡಿದ ಡಾಕ್ಟರ್ ದತ್ತೇಶ್ ಕುಮಾರ್
ಜಾಹೀರಾತು