ಕಲ್ಯಾಣಸಿರಿ ವಿಶೇಷ

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಲುವೆಗೆ ನೀರು ಬರುತ್ತಿಲ್ಲಾ: ಶಾಸಕ ಜಗದೀಶ ಗುಡಗುಂಟಿ

Is water not coming to the canal due to the negligence of the authorities: MLA Jagdish Gudgunti

*ಸಾವಳಗಿ ತುಂಗಳ ಏತ ನೀರಾವರಿ ಯೋಜನೆ,ನೀರಾವರಿ ಇಲಾಖೆ ಸಂಪೂರ್ಣ ವಿಫಲವಾಗಿದೆ

ಕಲ್ಯಾಣ ಸಿರಿ ಸುದ್ದಿ,

ಸಾವಳಗಿ: ಕೃಷ್ಣಾ ನದಿಯಿಂದ ಹಲ್ಯಾಳ ಪಂಪ ಸೆಟ್ಟಗೆ ನೀರು ಬಂದು, ಅಥಣಿ ತಾಲೂಕಿನ ರೈತರು ಕಾಲುವೆಗಳಿಗೆ ಪೈಪಲ್ಯಾನ ಮೋಟಾರಗಳನ್ನು ಹಚ್ಚುರುವುದರಿಂದ, ಈ ಭಾಗಕ್ಕೆ ನೀರು ಬರುವುತ್ತೀಲ್ಲಾ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವೇ ಎದ್ದು ಕಾಣುತ್ತದೆ, ಇದರಿಂದ ನಮ್ಮ ಈ ಭಾಗದ ರೈತಾಪಿ ಜನರಿಗೆ ಈ ನೀರಾವರಿ ಯೋಜನೆಯು ಅನುಕೂಲವಾಗುತ್ತಿಲ್ಲ, ಜಾಕ್ವೆಲಿನಲ್ಲಿ ನೀರಿಲ್ಲದೆ ಹೇಗೆ ಕಾಲುವೆಗೆ ಹರಿಸುತ್ತೀರಿ, ಸ್ವಲ್ಪ ಎಚ್ಚೆತ್ತು ಈ ನೀರಾವರಿ ಯೋಜನೆಯು ರೈತಾಪಿ ಜನರಿಗೆ ಅನುಕೂಲವಾಗುತ್ತಿಲ್ಲಾ ನೀವು ಜಾಕ್ವೆಲನಲ್ಲಿ ನೀರು ಇಲ್ಲದೆ ಹೇಗೆ ಕಾಲುವೆಗಳಿಗೆ ನೀರು ಬೀಡುತ್ತೀರಿ ಸ್ವಲ್ಪ ಎಚ್ಚರದಿಂದ ಕೆಲಸ ಮಾಡಿ ನಮ್ಮ ರೈತರಿಗೆ ನೀರು ಬರುವಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಖಡಕ್ಕಾಗಿ ಆದೇಶಿಸಿದ ಶಾಸಕ ನಾಡೋಜ ಜಗದೀಶ್ ಗುಡಗುಂಟಿ.

ಸಾವಳಗಿ ಸಮೀಪದ ತುಂಗಳ ಜಾಕ್ವೆಲಗೆ ಶನಿವಾರ ಭೇಟಿ ನೀಡಿದ ಜಮಖಂಡಿ ಶಾಸಕ ನಾಡೋಜ ಜಗದೀಶ್ ಗುಡಗುಂಟಿ ಅವರು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅಥಣಿ ಭಾಗದ ರೈತರು ಕಾಲುವೆಗಳಿಗೆ ಪೈಪ್ ಮೋಟಾರ್ ಹಚ್ಚಿ ಆ ಭಾಗಕ್ಕೆ ಹೆಚ್ಚು ನೀರು ಹರಿಯುವುದರಿಂದ ನಮ್ಮ ಭಾಗಕ್ಕೆ ಹೆಚ್ಚಾಗಿ ನೀರು ಬರುತ್ತಿಲ್ಲ ಅಧಿಕಾರಿಗಳು ಈ ಭಾಗಕ್ಕೆ ನೀರು ಹರಿಸಲು ಮುಂದಾಗುತ್ತಿಲ್ಲ, ಸೋಮವಾರ ಅಧಿವೇಶನ ಪ್ರಾರಂಭವಾಗಲಿದೆ ಅಧಿವೇಶನದಲ್ಲಿ ಮೋದಲ ಪ್ರಶ್ನೆ ಸಾವಳಗಿ ತುಂಗಳ ಏತ ನೀರಾವರಿ ಬಗ್ಗೆ ಇದೆ ಈ ಭಾಗದ ರೈತರಿಗೆ ಅನುಕೂಲವಾಗುಂತೆ ಕೆಲಸ ಮಾಡುತ್ತೇನೆ, ತುಂಗಳ ಜಾಕ್ವೆಲನಲ್ಲಿ ಎನ್ನು ತೊಂದರೆ ಇಲ್ಲ, ಅಥಣಿ ಭಾಗದವರು ನೀರು ಬೀಡುತತ್ತಿಲ್ಲಾ, ಆದ್ದರಿಂದ ಮೇಲಾಧಿಕಾರಿಗಳ ಜೊತೆ ಮಾತನಾಡಿ ನೀರನ್ನು ಬಿಡಿಸಲು ಪ್ರಯತ್ನ ಮಾಡುತ್ತೇನೆ, ಸದನದಲ್ಲಿ ನೀರಾವರಿ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಜೋತೆ ಮಾತನಾಡಿ ಈ ಭಾಗಕ್ಕೆ ಶಾಶ್ವತವಾಗಿ ಏತ ನೀರಾವರಿ ಯೋಜನೆ ಮಾಡಿಸೋಣ ಎಂದು ಭರವಸೆ ನೀಡಿದರು.‌

ಹೊಸ ಜಾಕ್ವೆಲ ನಿರ್ಮಾಣ: ತುಂಗಳ ಹಾಗೂ ಅಥಣಿ ಗಡಿ ಭಾಗದಲ್ಲಿ ಇರುವಂತಹ ಜಾಕ್ವೆಲನ ತುಬಚಿ ಭಾಗಕ್ಕೆ ಹೊಸ ಜಾಕ್ವೆಲನ ನಿರ್ಮಾಣ ಮಾಡೋಣ ಇಲ್ಲಿ ಇರುವಂತಹ ಉಪಕರಣಗಳು ತುಬಚಿ ಭಾಗದಲ್ಲಿ ಅವಳವಡಿಸಿ ಕೃಷ್ಣಾ ನದಿ ಇರುವುದರಿಂದ ಅಲ್ಲಿ ಜಾಕುವ ನಿರ್ಮಿಸಿದರೆ ನದಿಯಿಂದ ಕಾಲುವೆಗಳಿಗೆ ನೀರು ಹರಿಸಬಹುದು ಇದರಿಂದ ಐದು ಹಳ್ಳಿಗಳಿಗೆ ಸಂಪೂರ್ಣ ನೀರಾವರಿ ಯೋಜನೆಯಾಗುತ್ತದೆ ಎಂದು ಶಾಸಕರು ಹೇಳಿದರು.

ಜಾಕ್ವೆಲನಲ್ಲಿ ನೀರು ಖಾಲಿ: ಹಲ್ಯಾಳದಿಂದ ನೀರು ಬರುವುದು, ನಡುಬಾಗದಲ್ಲಿ ರೈತರು ಅಥಣಿ ಭಾಗದ ರೈತರು ಕಾಲುವೆಗಳಿಗೆ ಪೈಪ್ ಮೋಟಾರ್ ಹಚ್ಚಿ ನೀರು ತಮ್ಮ ಜಮೀನುಗಳಿಗೆ ಹರಿಸುವುದುರಿಂದ ತುಂಗಳ ಜಾಕ್ವೆಲಗೆ ನೀರು ಖಾಲಿಯಾಗಿದೆ, ಇದರಿಂದ ತುಂಗಳ ಸಾವಳಗಿ ಏತ ನೀರಾವರಿ ಯೋಜನೆಗೆ ಜಮೀನುಗಳಿಗೆ ನೀರು ಹೋಗುತ್ತಿಲ್ಲ ಎಂದು ರೈತರು ದೂರಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಅರವಿಂದಗೌಡ ಪಾಟೀಲ, ಬಿಜೆಪಿ ನಗರ ಅಧ್ಯಕ್ಷರಾದ ಅಜಯ ಕಡಪಟ್ಟಿ, ಹಿರಿಯರಾದ ಪುಲಿಕೇಶಿ ನಾಂದ್ರೇಕರ, ಚಿದಾನಂದ ಬಿರಾದಾರ, ರಾಜು ಹಿರೇಮಠ, ಗ್ರಾಮ ಪಂಚಾಯತ ಸದಸ್ಯರಾದ ಬಸವರಾಜ ಪರಮಗೌಡ, ಗಾಮೇಶ ಬಾಪಕರ, ಸುಜೀತಗೌಡ ಪಾಟೀಲ, ಭರತೇಶ ಜಮಖಂಡಿ, ಮುಖಂಡರಾದ ಕಿರಣ ಕದಂ, ರವಿ ಹಿಪ್ಪರಗಿ, ರಾಜು ಕರಾಬೆ, ಲಕ್ಷ್ಮಣ್ ಪುಂಡೆ, ಸದಾಶಿವ ಹೋನವಾಡ, ಪರಶುರಾಮ್ ಕುಂಬಾರ, ಸುರೇಶ ಮನಗೂಳಿ, ತುಕಾರಾಮ ಹಾಜವಗೋಳ, ಅಧಿಕಾರಿಗಳು ಸೇರಿದಂತೆ ಸುತ್ತ ಮುತಲಿನ ಗ್ರಾಮದ ರೈತರು ಹಿರಿಯರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago