ಗಂಗಾವತಿ ನಗರದ ವಾರ್ಡ್ ನಂಬರ್ 27 ಹಾರಿಜನವಾರ್ಡ್ ಏರಿಯಾದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಇಂದು ಗಂಗಾವತಿ ನಗರಸಭೆ ಮುಂದೆ ಪ್ರತಿಭಟನೆ ಮಾಡಿ ಒತ್ತಾಯದ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ರಾಜ್ಯ ಅಧ್ಯಕ್ಷರಾದ ಕಾ//ನಿರ್ಮಲ ರವರು ನಮ್ಮ ಸಂಘಟನೆಯ
ತಾಲ್ಲೂಕು ಸಮಿತಿಯು 27ನೇ ವಾರ್ಡ್ ನ ಸಮಸ್ಯೆಗಳ ಕುರಿತು ಈಗಾಗಲೇ ಸುಮಾರು ಪತ್ರಗಳನ್ನು ಸಲ್ಲಿಸಿದ್ದರು ಕೂಡ ಇದುವರೆಗೆ ಯಾವುದೇ ಕ್ರಮ ತೆಗೆದು ಕೊಳ್ಳದೆ ಇರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಈಗಲಾದರೂ ಹೆಚ್ಚೆತ್ತುಕೊಂಡು ಕೂಡಲೇ ವಾರ್ಡ್ ನ ಸಮಸ್ಯೆ ಬಗೆಹರಿಸಬೇಕು ಇಲ್ಲದಿದ್ದರೆ ಮುಂದೆ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಹೆಚ್ಚರಿಸಿದರು.
ಮನವಿ ಪತ್ರ ಸ್ವಿಕರಿಸಿದ AEE ಶಂಕರ್ ಗೌಡ ರವರು ಇಂದೆ ವಾರ್ಡಿನಲ್ಲಿ ಇರುವ ಸಮಸ್ಯೆಗಳಾದ ಶೌಚಾಲಯ ಕ್ಲೀನಿಂಗ್,ಶೌಚಾಲಯಕ್ಕೆ ರಸ್ತೆ,ಶೌಚಾಲಯಕ್ಕೆ ಸರಿಯಾದ ನೀರಿನ ವ್ಯವಸ್ಥೆ ಹಾಗೂ ವಾರ್ಡ್ ನಲ್ಲಿ ಫಾಗಿಂಗ್ ಮಾಡಿಸುವುದು,ವಾರ್ಡ್ ನಲ್ಲಿ ಬ್ಲೀಚಿಂಗ್ ಪೌಡರ್ ಇತರೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೆವೆ ಎಂದು ಒಪ್ಪಿಕೊಂಡರು.
ಈ ಸಂಧರ್ಭದಲ್ಲಿ ಹಿರಿಯ ಹೋರಾಟಗಾರರಾದ ಕಾ//ಭಾರದ್ವಾಜ್,ಕಾ//ರತ್ನಮ್ಮ ಬೆಂಗಳೂರ,ಕಾ//ವಿಜಯ ದೊರೆರಾಜು,ಕಾ//ಸಣ್ಣ ಹನುಮಂತಪ್ಪ ಹುಲಿಹೈದರ,ಕಾ//ಹುಲಿಗಮ್ಮ,ಕಾ//ರಾಘಮ್ಮ,ಕಾ//ಶೃತಿ,ಕಾ//ನೇತ್ರಾ,ಕಾ//ರೇಣುಕಮ್ಮ ಇತರರು ಇದ್ದರೂ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…