ಗಂಗಾವತಿಯ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಗೋಪಾಲ್ ಧೂಪದ್ ರವರು ಹೊಸಪೇಟೆಗೆ ವರ್ಗಾವಣೆ ಆಗಿರುತ್ತಾರೆ ಇವರಿಗೆ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘ ಗಂಗಾವತಿ ಕಚೇರಿಯಲ್ಲಿ ಇವರ ವತಿಯಿಂದ ಮಾನ್ಯ ಗೋಪಾಲ್ ಅವರಿಗೆ ತುಂಬಾ ವಿಶೇಷವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡುಗೆ ಕೊಡಲಾಯಿತು.
ಮಾನ್ಯ ಕಾರ್ಮಿಕ ನಿರೀಕ್ಷಕರಾದ ಗೋಪಾಲ್ ಧೂಪದ್ ಅವರು ಸರಳ ವ್ಯಕ್ತಿತ್ವ ಉಳ್ಳ ಅಧಿಕಾರಿಯಾಗಿದ್ದರು, ಅವರು ಇಲ್ಲಿ ಕೆಲಸ ನಿರ್ವಹಿಸುವ ಸಮಯದಲ್ಲಿ ಸಾಕಷ್ಟು ಬಡ ಜನರಿಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದ್ದರು, ಮತ್ತು ಇನ್ನಿತರ ಅನುಕೂಲವಾಗುವಂತಹ ಕೆಲಸವನ್ನು ಮಾಡುತ್ತಿದ್ದರು, ತಮ್ಮ ಕಚೇರಿಗೆ ಬರುವಂತಹ ಕಾರ್ಮಿಕರನ್ನು ಸಾರ್ವಜನಿಕರನ್ನು ತುಂಬಾ ವಿಶ್ವಾಸದಿಂದ ಮಾತನಾಡಿಸುತ್ತಿದ್ದರು, ಕಾರ್ಮಿಕರ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸಹಾಯ ಹಸ್ತವನ್ನು ಚಾಚುತ್ತಿದ್ದರು, ಕಾರ್ಮಿಕರ ಸಂಘ ಸಂಸ್ಥೆಗಳಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಜೊತೆ ಒಳ್ಳೆಯ ಕೆಲಸ ಮಾಡುತ್ತಿದ್ದರು.ಸರ್ಕಾರದ ಆದೇಶಗಳನ್ನು ಚಾಚು ತಪ್ಪದೇ ಪಾಲಿಸುತ್ತಾ ಎಲ್ಲರಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡಿದ್ದಾರೆ.
ಇಂತಹ ಅಧಿಕಾರಿ ಇನ್ನು ಸಾಕಷ್ಟು ದಿನಗಳ ಕಾಲ ಗಂಗಾವತಿಯಲ್ಲಿ ಇರಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಹೊಸಪೇಟೆಗೆ ವರ್ಗಾವಣೆಗೊಂಡರು.
ಈ ಸಂದರ್ಭದಲ್ಲಿ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷರು ಮತ್ತು ಸಂಸ್ಥಾಪಕರಾದ ಶಿವಕುಮಾರ್ ಗೌಡ, ಪಂಪ ಪತಿ ಇಂಗಳಗಿ ಕೊಪ್ಪಳ ಜಿಲ್ಲಾ ಅಧ್ಯಕ್ಷರು, ಚಂದ್ರು, ವೀರೇಶ್, ಯ, ಹನುಮಂತಪ್ಪ ,ರಮೇಶ್, ಬಾಬು ಮೇಸ್ತ್ರಿ ,ಹುಸೇನಿ, ರಾಮು, ಹುಲುಗಪ್ಪ, ಶಂಕರ್, ಆಂಜನೇಯ, ಪರಶುರಾಮ, ಅಬ್ದುಲ್, ವಿಜಯಕುಮಾರ್, ವಿಶ್ವನಾಥ್ ,ಹನುಮಂತ ಹಾಗೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಅವರನ್ನು ಸಂತಸದಿಂದ ಬೇಳ್ಕೊಡೆಯ ಕೊಟ್ಟರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…