Breaking News

ಗಂಗಾವತಿ: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಸಾವು

Gangavati: Death of three youths who were drinking alcohol while sitting on the tracks

ಜಾಹೀರಾತು
Screenshot 2024 07 19 10 21 31 34 40deb401b9ffe8e1df2f1cc5ba480b12 300x140

ಗಂಗಾವತಿ:ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಗುರುವಾರ ರಾತ್ರಿ ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ.

ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್​​ನ ವೆಂಕಟ ಭೀಮರಾಯ ಮಂಗಳೂರು (20) ಮೃತಪಟ್ಟಿದ್ದಾರೆ.

ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಕುಡಿದು . ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಬಂದಿದ್ದು, ಯುವಕರು ಭೀಕರವಾಗಿ ಸಾವನ್ನಪ್ಪಿದ್ದಾರೆ.

ಗದಗ ವಿಭಾಗದ ರೈಲ್ವೆ ಪೊಲೀಸರು ಘಟನಾ

ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್ ಗಳಿದ್ದು ಸ್ಥಳಕ್ಕೆ ರೈಲ್ವೇ ಇಲಾಖೆಯ ಪಿಎಸ್ಐ ಬಿ.ಎನ್.ರಾಮಣ್ಣ ನೇತೃತ್ವದ ರೈಲ್ವೇ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ

Screenshot 2024 07 19 10 21 31 34 40deb401b9ffe8e1df2f1cc5ba480b12

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.