ಕಲ್ಯಾಣಸಿರಿ ವಿಶೇಷ

ಗಂಗಾವತಿ ರೋಟರಿ ಯಿಂದ ನೂತನ ಸಂಸದರಿಗೆ ಮನವಿ

Appeal to new MPs from Gangavati Rotary

ಕೊಪ್ಪಳ: ಇಂದು ಹಿಟ್ನಾಳ ಗ್ರಾಮದಲ್ಲಿ ಗಂಗಾವತಿ ರೋಟರಿ ಸದಸ್ಯರು ಕೊಪ್ಪಳ ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ರವರಿಗೆ ಸಂಸ್ಥೆ ಪರವಾಗಿ ಸನ್ಮಾನಿಸಲಾಯಿತು. ಅಲ್ಲದೆ ಗಂಗಾವತಿ ರೈಲ್ವೇ ನಿಲ್ದಾಣದಕ್ಕೆ ಸಂಬಂಧಿಸಿದ ಮೂಲಭೂತ ಸೌಲಭ್ಯಗಳು, ಪ್ರಯಾಣಿಕರಿಗೆ ಹಲವು ಉಪಯೋಗಗಳು ಮತ್ತು ಗಂಗಾವತಿ ಯಿಂದ ಬೆಂಗಳೂರು ರೈಲ್ವೆ ಸಮಯ ಮತ್ತು ಮಾರ್ಗ ಬದಲಾವಣೆ, ದರೋಜಿ -- ಬಾಗಲಕೋಟೆ ನೂತನ ಮಾರ್ಗ, ಹಲವು ರೈಲ್ವೇ ಮಾರ್ಗ ವಿಸ್ತರಣೆ, ರೈಲ್ವೇ ನಿಲ್ದಾಣಕ್ಕೆ ಕಿಷ್ಕಿಂಧ/ ಅಂಜನಾದ್ರಿ ನಾಮಕರಣ, ನೂತನ ಗಂಗಾವತಿ ಜಿಲ್ಲಾ ರಚನೆ, ವಿಮಾನ ನಿಲ್ದಾಣ, ಟೋಲ್ ಗೇಟ್,ಹೀಗೆ ಹಲವಾರು ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಗಳ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗಂಗಾವತಿ ರೋಟರಿ ಸಂಸ್ಥೆ ಅಧ್ಯಕ್ಷರಾದ ಟಿ.ಆಂಜನೇಯ, ಕಾರ್ಯದರ್ಶಿ ವಾಸು ಕೊಳಗದ, ಅಸಿಸ್ಟೆಂಟ್ ಗವರ್ನರ್ ಮಹೇಶ ಸಾಗರ, ರೋಟರಿ ಸಂಸ್ಥೆ ಪದಾಧಿಕಾರಿಗಳಾದ ಜೆ. ನಾಗರಾಜ , ಸಲಾಹುದ್ದೀನ ಸುರಪುರ, ಜೆ. ದೊಡ್ಡಯ್ಯ, ಶ್ರೀನಿವಾಸ ಸಿ ಹೆಚ್,. ಎ.ಶಿವಕುಮಾರ, ಮಂಜುನಾಥ ಹೆಚ್ ಎಂ, ದಿಲೀಪ ಮೋತಾ, ಮಂಜುನಾಥ ಹುಡೇದ ಇನ್ನಿತರರು ಉಪಸ್ಥಿತರಿದ್ದರು* *ಮನವಿ ಮತ್ತು ಸನ್ಮಾನ ಸ್ವೀಕರಿಸಿದ ಸಂಸದರು ಮುಂದಿನ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರೈಲ್ವೆ ಸಚಿವರ ಜೊತೆ ಚರ್ಚಿಸಿ ಗಂಗಾವತಿ,ಕಾರಟಗಿ, ಸಿಂಧನೂರು ದಿಂದ ಸಂಚರಿಸುವ ರೈಲ್ವೇ ಮತ್ತು ದರೋಜಿ - ಬಾಗಲಕೋಟೆ, ಇನ್ನಿತರ ಕಾಮಗಾರಿಗಳಿಗೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago