Breaking News

ಸಂಬ್ರಮದ ಮೃತ್ಯುಂಜಯೇಶ್ವರ ಮಹಾರಥೋತ್ಸವ

Mrityunjayeshwar Maharathotsava of Sambram

ಜಾಹೀರಾತು
IMG 20240721 WA0336 300x141

ಕೊಪ್ಪಳ, 21- ಐತಿಹಾಸಿಕ ಶ್ರೀ ಮೃತ್ಯುಂಜಯೇಶ್ವರ ಕ್ಷೇತ್ರ ಕರ್ಕಿಹಳ್ಳಿಯಲ್ಲಿ ಗುರು ಪೌರ್ಣಿಮೆಯ ಅಂಗವಾಗಿ ಶ್ರೀ ಚಿದಂಬರೇಶ್ವರರ ೨೧ನೇ ಮಹಾರಥೋತ್ಸವವು ನೇರೆದಿದ್ದ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಜರುಗಿತು.
ರವಿವಾರ ಮದ್ಯಾಹ್ನ ಮಳೆಯ ಮಧ್ಯ ಭಕ್ತರು ಹರ್ಷೋದ್ಘಾರದಿಂದ ರಥಕ್ಕೆ ಉತ್ತತ್ತಿ, ಬಾಳೆಹಣ್ನು ಸಮರ್ಪಿಸಿ ಸಂಸತ ಪಟ್ಟರು.
ಮಹಾರಥೋತ್ಸವದ ಪೂರ್ವಭಾವಿಯಾಗಿ ಭಾನುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು ಮಂಗಳವಾರ ಧಾರಣಸರಸ್ವತಿ ಹೋಮ, ಮಹಾಲಕ್ಷ್ಮಿ ಹೋಮ, ೧೭ರಂದು ಆಷಾಢ ಏಕಾದಶಿಯ ಅಂಗವಾಗಿ ಕ್ಷೀರಾಭಿಷೇಕ, ತುಳಸಿ ಆರ್ಚನೆ, ಸತ್ಯನಾರಾಯಣ ವ್ರತ, ಮಹಾವಿಷ್ಣುಯಾಗ, ೧೮ರಂದು ದತ್ತ ಮೂಲ ಮಂತ್ರದಿAದ ದತ್ತಾತ್ರೇಯ ಹೋಮ, ೧೯ರಂದು ಸಪ್ತಶತಿ ಪಾರಾಯಣ, ನವಚಂಡಿಹೋಮ ಸಂಜೆ ೫ ಗಂಟೆಗೆ ಮೃತ್ಯುಂಜಯೇಶ್ವರ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
೨೦ರಂದು ಬೆಳಿಗ್ಗೆ ೧೧ ಗಂಟೆಗೆ ಉಚ್ಛಾಯ, ೨೧ರಂದು ಅಖಂಡ ವೀಣಾ ಮಂಗಳ, ಮಹಾರಥೋತ್ಸವದ ರಥಾಂಗ ಹೋಮ, ರಥ ಎಳೆಯುವುದು, ಆರತಿ, ನೈವೆದ್ಯ, ಅನ್ನಸಂತರ್ಪಣೆ ಮತ್ತು ಸಂಜೆ ಸಿಡಿಮದ್ದಿನ ಸಂಭ್ರಮದಿಂದ ಜರಗಿತು.
ರಥೋತ್ಸವದ ಅಂಗವಾಗಿ ರವಿವಾರ ಬೆಳಿಗ್ಗೆ ಮೃತ್ಯುಂಜಯೇಶ್ವರನಿಗೆ ಅಭಿಷೇಕ, ಬುತ್ತಿಪೂಜೆ, ಮಹಾನೈವೇದ್ಯ ಜರುಗಿತು. ರಥೋತ್ಸವದಲ್ಲಿ ರಾಜ್ಯ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯ ಹಾಗೂ ಬೇರೆ ಜಿಲ್ಲೆಗಳ ಭಕ್ತರು ಭಾಗವಹಿಸಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.