Breaking News

ಸ್ವಾಭಿಮಾನದಿಂದ ಸಂಘಟನೆ ನಡೆಸಿ : ಹಳ್ಳಿ

Run an organization with self-respect: Halli

ಜಾಹೀರಾತು
IMG 20240722 WA0287 300x225

ವರದಿ : ಪಂಚಯ್ಯ ಹಿರೇಮಠ,,,
ಕೊಪ್ಪಳ ( ಯಲಬುರ್ಗಾ) : ನಮ್ಮ ಸಂಘಟನೆಯ ಪದಾಧಿಕಾರಿಗಳು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಉಳಿವಿಗಾಗಿ ಸ್ವಾಭಿಮಾನದ ಬದುಕನ್ನು ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ ಹೇಳಿದರು.

ಸೋಮವಾರದಂದು ಯಲಬುರ್ಗಾ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ನೂತನ ತಾಲೂಕಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಯಾವ ಸದಸ್ಯರು ಬೇರೆಯವರ ಮಾತಿಗೆ ಕಿವಿಗೊಡದೇ ಸಂಘಟನೆಯನ್ನು ಗ್ರಾಮೀಣ ಮಟ್ಟದಿಂದ ತಾಲೂಕ ಮಟ್ಟದವರೆಗೆ ಬಲಿಷ್ಠಗೊಳಿಸಬೇಕು ಎಂದರು.

ನಂತರದಲ್ಲಿ ಯಲಬುರ್ಗಾ ನೂತನ ತಾಲೂಕಾಧ್ಯಕ್ಷ ರುದ್ರಪ್ಪ ಬೇವೂರ ಮಾತನಾಡಿ ಸಂಘಟಕರಲ್ಲಿ ಯಾವುದೇ ಬಿನ್ನಾಭಿಪ್ರಾಯವಿರದೇ, ಸಮಾನ ಮನಸ್ಕರಾಗಿ ಸಂಘಟಿಸಲು ಮುಂದಾಗಬೇಕು.

ಭಷ್ಟ ಅಧಿಕಾರಿಗಳ ವಿರುದ್ದ ಹಾಗೂ ಭ್ರಷ್ಟ ವ್ಯವಸ್ಥೆ ವಿರುದ್ದ ಯಾವುದೇ ಭಯವಿಲ್ಲದೇ ಯಾವ ಮುಲಾಜೀಗೂ ಒಳ ಪಡದೇ ನಿರ್ಭಯವಾಗಿ ಹೋರಾಟ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳ ಕೂಗಿಗೆ ಸ್ಪಂದಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹೇಶ ನೆರೆಗಲ್ ಕುಕನೂರ ತಾಲೂಕಾಧ್ಯಕ್ಷ ಮರಿಯಪ್ಪ ಕನಕಗಿರಿ, ಯುವ ಘಟಕದ ಮಂಜುನಾಥ ತಳವಾರ, ಶರಣು ಕಾಳಿ, ಸುಕಮುನಿ ನಾಯಕ, ಬಸವರಾಜ ಹುಲಿ, ಅಮರೇಶ್ ಗೌಡ್ರ, ಹನುಮಂತ ಸಣ್ಣಮನಿ, ರಮೇಶ ರಾವಣಕಿ, ಬಸವರಾಜ ಹುಲಿ, ಪ್ರವೀಣ ಲಿಂಗನಬಂಡಿ ಇನ್ನಿತರ ಪದಾಧಿಕಾರಿಗಳು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.