Run an organization with self-respect: Halli
ವರದಿ : ಪಂಚಯ್ಯ ಹಿರೇಮಠ,,,
ಕೊಪ್ಪಳ ( ಯಲಬುರ್ಗಾ) : ನಮ್ಮ ಸಂಘಟನೆಯ ಪದಾಧಿಕಾರಿಗಳು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಉಳಿವಿಗಾಗಿ ಸ್ವಾಭಿಮಾನದ ಬದುಕನ್ನು ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ ಹೇಳಿದರು.
ಸೋಮವಾರದಂದು ಯಲಬುರ್ಗಾ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ನೂತನ ತಾಲೂಕಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಯಾವ ಸದಸ್ಯರು ಬೇರೆಯವರ ಮಾತಿಗೆ ಕಿವಿಗೊಡದೇ ಸಂಘಟನೆಯನ್ನು ಗ್ರಾಮೀಣ ಮಟ್ಟದಿಂದ ತಾಲೂಕ ಮಟ್ಟದವರೆಗೆ ಬಲಿಷ್ಠಗೊಳಿಸಬೇಕು ಎಂದರು.
ನಂತರದಲ್ಲಿ ಯಲಬುರ್ಗಾ ನೂತನ ತಾಲೂಕಾಧ್ಯಕ್ಷ ರುದ್ರಪ್ಪ ಬೇವೂರ ಮಾತನಾಡಿ ಸಂಘಟಕರಲ್ಲಿ ಯಾವುದೇ ಬಿನ್ನಾಭಿಪ್ರಾಯವಿರದೇ, ಸಮಾನ ಮನಸ್ಕರಾಗಿ ಸಂಘಟಿಸಲು ಮುಂದಾಗಬೇಕು.
ಭಷ್ಟ ಅಧಿಕಾರಿಗಳ ವಿರುದ್ದ ಹಾಗೂ ಭ್ರಷ್ಟ ವ್ಯವಸ್ಥೆ ವಿರುದ್ದ ಯಾವುದೇ ಭಯವಿಲ್ಲದೇ ಯಾವ ಮುಲಾಜೀಗೂ ಒಳ ಪಡದೇ ನಿರ್ಭಯವಾಗಿ ಹೋರಾಟ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳ ಕೂಗಿಗೆ ಸ್ಪಂದಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹೇಶ ನೆರೆಗಲ್ ಕುಕನೂರ ತಾಲೂಕಾಧ್ಯಕ್ಷ ಮರಿಯಪ್ಪ ಕನಕಗಿರಿ, ಯುವ ಘಟಕದ ಮಂಜುನಾಥ ತಳವಾರ, ಶರಣು ಕಾಳಿ, ಸುಕಮುನಿ ನಾಯಕ, ಬಸವರಾಜ ಹುಲಿ, ಅಮರೇಶ್ ಗೌಡ್ರ, ಹನುಮಂತ ಸಣ್ಣಮನಿ, ರಮೇಶ ರಾವಣಕಿ, ಬಸವರಾಜ ಹುಲಿ, ಪ್ರವೀಣ ಲಿಂಗನಬಂಡಿ ಇನ್ನಿತರ ಪದಾಧಿಕಾರಿಗಳು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…