Information worker on mosquito-borne diseases and control for Taluk Panchayat Development Officers

ಗಂಗಾವತಿ:ಇಂದು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಿಂದ ಕಾರಟಗಿ ಮತ್ತು ಗಂಗಾವತಿ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೊಳ್ಳೆಯಿಂದ ಹರಡುವ ರೋಗಗಳು ಹಾಗೂ ನಿಯಂತ್ರಣ ಕುರಿತು ಮಾಹಿತಿ ಕಾರ್ಯಗಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಶಿವಾನಂದ ಮಾತನಾಡಿ ಸೊಳ್ಳೆ ಕಡಿತ ಚಿಕ್ಕದು ಕಂಟಕ ದೊಡ್ಡದು ಎಂದು ತಿಳಿಸಿದರು.
ಮೇಲ್ವಿಚಾರಕರಾದ ದೇವೇಂದ್ರಗೌಡ ಮಾತನಾಡಿ ಡೆಂಗ್ಯೂ ಕಾಯಿಲೆ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ ,
ಗ್ರಾಮಗಳಲ್ಲಿ ಡೆಂಗ್ಯೂ ಪ್ರಕರಣ ವರದಿಯಾದ ಕೂಡಲೇ ಒಳಾಂಗಣ ಧುಮಿಕರಣ ಮಾಡುವ ಮೂಲಕ ಡೆಂಗ್ಯೂ ಒಬ್ಬರಿಂದ ಒಬ್ಬರಿಗೆ ಪಸರಿಸುವುದನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಪ್ರಭಾರಿ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಗುರುರಾಜ್ ಮಾತನಾಡಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಕಂಡು ಬರುವ ಅನುಪಯುಕ್ತ ಘನ ತ್ಯಾಜ್ಯ ವಸ್ತುಗಳಾದ ಸಿಮೆಂಟ್ ತೊಟ್ಟಿ. ಬಾವಿ, ದನಕರಗಳಿಗೆ ಮೀಸಿಲಿಟ್ಟ ಸಂಪುಗಳು, ನೀರಿನ ಟ್ಯಾಂಕ್ ಪ್ರತಿ 15 ದಿನಕ್ಕೆ ಒಂದು ಸಾರಿಯಾದರೂ ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು,
ಸದರಿ ಕಾರ್ಯಕ್ರಮದಲ್ಲಿ ಕಾರಟಗಿ ಮತ್ತು ಗಂಗಾವತಿ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಕ್ಷಯರೋಗ ವಿಭಾಗದ ಮೇಲ್ವಿಚಾರಕರಾದ ಹುಸೇನ್ ಬಾಷಾ , ನಾಗರಾಜ, ಕುಷ್ಟರೋಗ ಮೇಲ್ವಿಚಾರಕರಾದ ಸುರೇಶ್, ಮಲೇರಿಯಾ ಲಿಂಕ್ ವರ್ಕರ್ ಗುರು,
ಇತರರು ಕಾರ್ಯಕ್ರಮದಲ್ಲಿ ಇದ್ದರು.