ಕಲ್ಯಾಣಸಿರಿ ವಿಶೇಷ

ಬಿಜೆಪಿ-ಜೆಡಿಎಸ್ ಪಕ್ಷದ ಮುಖಂಡರ ಷಡ್ಯಂತ್ರ ಫಲ ನೀಡುವುದಿಲ್ಲ -ಸಚಿವ ತಂಗಡಗಿ

Conspiracy of BJP-JDS party leaders will not bear fruit – Minister Thandagi

ಗಂಗಾವತಿ: ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿ ಛೀಮಾರಿ ಹಾಕಿಸಿಕೊಂಡು ೨೦ ಲಕ್ಷ ರೂ.ಗಳ ದಂಡ ಪಾವತಿಸಿದ್ದ ಸಾಮಾಜಿಕ ಕರ‍್ಯರ‍್ತನೆಂದು ಹೇಳಿಕೊಳ್ಳುವ ಟಿ.ಜೆ.ಅಬ್ರಾಹಂ ಒಬ್ಬ ಬ್ಲಾಕ್ ಮೇಲರ್ ಆಗಿದ್ದು, ಜನರಿಂದ ಪೂರ್ಣ. ಬಹುಮತ ಪಡೆದ ಸರಕಾರ ಅಸ್ಥಿರಗೊಳಿಸುವ ಬಿಜೆಪಿ-ಜೆಡಿಎಸ್ ಪಕ್ಷದ ಮುಖಂಡರ ಷಡ್ಯಂತ್ರ ಫಲ ನೀಡುವುದಿಲ್ಲ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.

ಚಿಕ್ಕಜಂತಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಟಿ.ಜೆ.ಅಬ್ರಾಹಂ ಕಳೆದ ಮೂರು ದಶಕಗಳಿಂದ ಬ್ಲಾಕ್‌ ಮೇಲ್ ವೃತ್ತಿ ಮಾಡುತ್ತಿದ್ದು ಅನೇಕ ಸಲ ವಿವಿಧ ಮುಖಂಡರು ಹಾಗೂ ಇತ್ತೀಚಿನ ರ‍್ಷದಲ್ಲಿ ಪ್ರಕರಣ ಒಂದಕ್ಕೆ ಸಂಬಂಧಿಸಿ ಸುಪ್ರೀಂ ಕರ‍್ಟಿನಿಂದ ಛೀಮಾರಿ ಹಾಕಿಸಿಕೊಂಡು ೨೦ ಲಕ್ಷ ರೂ.ಗಳ ದಂಡ ಕಟ್ಟಿದ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳುತ್ತಿರುವುದು ಹಾಸ್ಯಾಸ್ಪದ ಎಂದರು.
ರಾಜ್ಯಪಾಲರು ನೂರಾರು ಪುಟಗಳ ದೂರನ್ನು ಒಂದೇ ದಿನದಲ್ಲಿ ಓದಿ ಮುಖ್ಯಮಂತ್ರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು ಬಿಜೆಪಿ-ಜೆಡಿಎಸ್ ಪಕ್ಷಗಳ ಷಡ್ಯಂತ್ರವಾಗಿದೆ. ರಾಜ್ಯದಲ್ಲಿ ಮಳೆ ಪ್ರವಾಹದಲ್ಲಿ ಜನತೆ ಸಂಕಷ್ಟಪಡುವ ಸಂರ‍್ಭದಲ್ಲಿ ಬಿಜೆಪಿ ಜೆಡಿಎಸ್‌ನವರಿಗೆ ಪ್ರಚಾರಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ದಮನಿತರು, ದಲಿತರು ಸೇರಿ ಅಹಿಂದ ರ‍್ಗದವರ ಕಲ್ಯಾಣಕ್ಕೆ ಹಗಲು ರಾತ್ರಿ ಕೆಲಸ ಮಾಡುತ್ತಿದ್ದು ಇಂತಹ ವ್ಯಕ್ತಿಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ಸುಳ್ಳಿನ ಮೇಲೆ ಸುಳ್ಳು ಹೇಳುತ್ತಿದ್ದು ಸಿದ್ದರಾಮಯ್ಯರಿಗೆ ಮಾಡುವ ಅವಮಾನ ಅಹಿಂದ ಮತ್ತು ಬಡವರಿಗೆ ಮಾಡಿದಂತಾಗಿದೆ ಎಂದರು.
ಬಿಜೆಪಿ ಜೆಡಿಎಸ್ ಮುಖಂಡರು ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರಕಾರ ಬೀಳಲಿದೆ ಎಂದು ಪದೇ ಪದೇ ಹೇಳುತ್ತಿದ್ದು ನೋಡಿದರೆ ರಾಜ್ಯ ಸರಕಾರದ ಅಸ್ಥಿರತೆಯ ಹಿಂದೆ ಕೇಂದ್ರ ಸರಕಾರದ ಕೈವಾಡ ಇರುವ ಶಂಕೆಯಾಗುತ್ತಿದೆ. ಮುಡಾ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯನವರ ತಪ್ಪಿಲ್ಲ. ಬಿಜೆಪಿ ಜೆಡಿಎಸ್ ಬಹುತೇಕ ಮುಖಂಡರು ಅಥವಾ ಅವರ ಕುಟುಂಬದವರಿಗೆ ಹಾಗೂ ದೇವೇಗೌಡ, ಕುಮಾರಸ್ವಾಮಿ, ಯಡಿಯೂರಪ್ಪ, ಜಿ.ಟಿ.ದೇವೆಗೌಡ, ಸಾ.ರಾ,ಮಹೇಶ ಹೀಗೆ ಅನೇಕರು ನಿವೇಶನ ಹಂಚಿಕೆ ಮಾಡಿಸಿಕೊಂಡಿದ್ದಾರೆ. ಈಗ ಸತ್ಯಹರಿಶ್ಚಂದ್ರರಂತೆ ನಾಟಕವಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago