Breaking News

ಗುಳೆ ಗ್ರಾಮದಲ್ಲಿ ಮನೆ ಮನೆಗೆ ವಚನ ಜ್ಯೋತಿ ಕಾರ್ಯಕ್ರಮ

Door-to-door vachana jyoti program in Gule village

ಜಾಹೀರಾತು
IMG 20240802 WA0329 295x300


ಯಲಬುರ್ಗಾ ತಾಲೂಕಿನ ಗುಳೆ ಗ್ರಾಮದಲ್ಲಿ, ರಾಷ್ಟ್ರೀಯ ಬಸವ ದಳ ಮತ್ತು ಅಕ್ಕ ನಾಗಲಾಂಬಿಕ ಮಹಿಳಾ ಗಣದ ವತಿಯಿಂದ, ದಿನಾಂಕ:05/8/2024 ರಿಂದ ಒಂದು ತಿಂಗಳ ನಿರಂತರ ಮನೆ ಮನೆಗ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವು ದಿನಾಲು ಸಂಜೆ 6:30 ರಿಂದ ಪ್ರಾರಂಭಗೊಳ್ಳಲಿದ್ದು, ದಿನಾಂಕ 04/08/2024 ರುಂದು ಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಿಂದ ಜೋತಿ ಹೊತ್ತಿಸಿಕೊಂಡು ಬಂದು , ದಿನಕ್ಕೊಂದು ದಿನ ಮನೆಯಿಂದ ಮನೆಗೆ ತೆರಳಿ, ಕುಟುಂಬದವರನ್ನ ಸಂಗಮಗೊಳಿಸಿಕೊಂಡು, ಮನ ಮುಟ್ಟುವಂತೆ, ಗುರು ಪೂಜೆ, ಲಿಂಗ ಪೂಜೆ ನಂತರ ಬಸವಾದಿ ಶಿವಶರಣರ ಜೀವನ ಚರಿತ್ರೆಯ ಆದಿಯಾಗಿ ವಚನ ವಿಶ್ಲೇಷಣೆ ಮತ್ತು ಶರಣರು ತೋರಿಸಿಕೊಟ್ಟ ಸತ್ಯ ಸುದ್ಧ ಕಾಯಕದ ಪರಿಕಲ್ಪನೆಯ ಕುರಿತಾಗಿ ಉಪನ್ಯಾಸ ನೀಡಿ, ಮೂಢ ನಂಬಿಕೆಗಳಂತ ಮೌಢ್ಯಾಚರಣೆಗಳಿಂದ ಪರಿವರ್ತನೆ ಮಾಡುವ ಕಾರ್ಯ ಈ ವಚನ ಜ್ಯೋತಿ ಕಾರ್ಯಕ್ರಮದ ಉದ್ದೇಶ ಆಗಿದೆ. ಕಾರಣ ಸುತ್ತ ಮುತ್ತಲಿನ ಗ್ರಾಮದ ಶರಣ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರ್ಯಕ್ರಮ ಯಶಸ್ವಿಯಾಗಲು ಕಾರಣೀಭೂತರಾಗಬೇಕೆಂದು ಪತ್ರಿಕೆ ಮಾಧ್ಯಮದ ಮೂಲಕ ಮನವಿ ಮಾಡಿಕೊಳ್ಳುತ್ತೇವೆ.
ಸ್ವಾಗತ ಬಯಸುವವರು : ರಾಷ್ಟ್ರೀಯ ಬಸವ ದಳದ ಗೌರವಾದ್ಯಕ್ಷರು ಶರಣ ಬಸವನಗೌಡ ಪೋಲಿಸ್ ಪಾಟೀಲ್ ನಿವೃತ್ತ ಪಿ. ಎಸ್ ಐ ಮತ್ತು ಅಧ್ಯಕ್ಷರು ಪದಾಧಿಕಾರಿಗಳು👏
✍️ ಬಸವರಾಜ ಎಸ್ ಹೂಗಾರ ರಾಷ್ಟ್ರೀಯ ಬಸವ ದಳ ಶರಣ ಗ್ರಾಮ ಗುಳೆ

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.