Breaking News

ವಿಶ್ವಕರ್ಮರನ್ನು ಸ್ತುತಿಸುವ ಭಕ್ತಿ ಗೀತ ಗಾಯನ ಮತ್ತು ನೃತ್ಯ ಸ್ಪರ್ಧೆ ಸೆ 27 ರಂದು ಆಯೋಜನೆ

A devotional song singing and dancing competition in praise of Vishwakarma will be organized on 27th September

ಜಾಹೀರಾತು


ಬೆಂಗಳೂರು, ಆ, 2; ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ “ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವ” ಅಂಗವಾಗಿ ಭಗವಾನ್ ವಿಶ್ವಕರ್ಮರ ಕುರಿತಾದ ಭಕ್ತಿ ಗೀತ ಗಾಯನ ಮತ್ತು ನೃತ್ಯ ಸ್ಪರ್ಧೆಯನ್ನು ಸೆಪ್ಟೆಂಬರ್ 27 ರಂದು ಆಯೋಜಿಸಲಾಗಿದೆ ಎಂದು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಕಲಾಪೋಷಕ ವಿಶ್ವಕರ್ಮ ನಾಡೋಜ ಡಾ. ಉಮೇಶ್ ಕುಮಾರ್ ತಿಳಿಸಿದ್ದಾರೆ.

ಅವರು ಸ್ಪರ್ಧೆಯ ಜಾಗೃತಿ ಪತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಖ್ಯಾತ ನೃತ್ಯ ತೀರ್ಪುಗಾರರಾದ = ಷಡಕ್ಷರಿ, ಭಾವನಾ ವೆಂಕಟೇಶ್ವರ, ಚೈತ್ರ ಅನಂತ್, ಅನುರಾಧ ಲೋಕೇಶ್ ಹಾಗೂ ಖ್ಯಾತ ಸಂಗೀತ ತೀರ್ಪುಗಾರರಾದ ರೋಹಿಣಿ ರಘುನಂದನ್, ಮಹೇಶ್ ಮಹದೇವ್, ಪ್ರಿಯದರ್ಶಿನಿ, ಶ್ಲಾಘ್ಯ ವಶಿಷ್ಠ ರವರುಗಳು ಮಾತನಾಡಿ ಭಗವಾನ್ ವಿಶ್ವಕರ್ಮರನ್ನು ಸ್ತುತಿಸುವ ಈ ಸ್ಪರ್ಧೆಗಳಿಗೆ ವಿಡಿಯೋ ಆಡಿಶನ್ ಮೂಲಕ ಸ್ಪರ್ಧಾಳುಗಳನ್ನು ಆಯ್ಕೆ ಮಾಡಲಿದ್ಧಾರೆ. ಅಂತಿಮ ಸ್ಪರ್ಧೆಗಳು ಸೆಪ್ಟೆಂಬರ್ 27 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ಶಂಕರ್.ಜಿ ಹಾಗೂ ಶ್ರೀಮತಿ ರಮ್ಯಾ ಕೃಷ್ಣಮೂರ್ತಿ ಮಾತನಾಡಿ ಸ್ಪರ್ಧೆಗೆ ಎಲ್ಲಾ ವಯೋಮಾನ, ಎಲ್ಲಾ ಸಮುದಾಯದವರಿಗೆ ಅವಕಾಶವಿದ್ದು, ಏಕ ವ್ಯಕ್ತಿ ಇಲ್ಲವೆ ಸಮೂಹ ಗಾಯನ ಹಾಗೂ ನೃತ್ಯ ಪ್ರದರ್ಶನ ಮಾಡಬಹುದಾಗಿದೆ. ಮೊದಲ ಮೂವರು ವಿಜೇತರಿಗೆ ಕ್ರಮವಾಗಿ 10 ಸಾವಿರ, 8 ಸಾವಿರ, 6 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಆಸಕ್ತರು 9019364440 ಸಂಖ್ಯೆಗೆ ವಾಟ್ಸ್ ಅಪ್ ಮೂಲಕ , 10 ನಿಮಿಷದ ವಿಡಿಯೋ ಕಳುಹಿಸಿ ಆಡಿಷನ್ ನಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.