ವಿಜೃಂಭಣೆಯಿಂದ ಜರುಗಿದ ಮಾದಪ್ಪನ ಸನ್ನಿಧಿಯಲ್ಲಿ ಭೀಮನ ಅಮವಾಸ್ಯೆ ಪೂಜಾ ಕಾರ್ಯ

Bhima’s Amavasya Puja in the presence of Madappa, which was celebrated with exuberance.


ವರದಿ : ಬಂಗಾರಪ್ಪ ,ಸಿ .

ಹನೂರು : ರಾಜ್ಯದ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ 108 ಕುಂಭೋತ್ಸವ ಸೇವೆ ಸೇರಿದಂತೆ ಇನ್ನಿತರ ಪೂಜೆಗಳು ಬಹಳ ಭಕ್ತಿಪೂರ್ವಹಕವಾಗಿ ಅರ್ಚಕ ತಂಡ ನೆರವೆರಿಸಿತು .
ಸಾವಿರಾರು ಭಕ್ತರು ಆಗಮಿಸಿ ಸೋಮವಾರ ಶ್ರದ್ಧಾಭಕ್ತಿಯಿಂದ ನೆರೆವೇರಿಸಿದರು :
ಸನ್ನಿಧಾನದ ಆಗಮಿಕರಾದ ಕರವೀರಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರು ಮಜ್ಜನಬಾವಿಯಿಂದ 108 ಕುಂಭಗಳನ್ನು* ಹೊತ್ತು ತಂದು ಹೋಮ ನೆರವೇರಿಸಿ ಸ್ವಾಮಿಗೆ ಅಭಿಷೇಕ ಮಾಡಿದ್ದಾರೆ. ಇದರೊಟ್ಟಿಗೆ, 108 ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು.

ದೇವಾಲಯದಲ್ಲಿ ಮೊದಲಪೂಜೆ ಆರಂಭವಾಗಿದ್ದು, ಇದರ ಜೊತೆಗೆ ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ 108 ಅರ್ಚಕರು ಕುಂಬ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು.

ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು. ಪ್ರತಿದಿನ ದೇವರಿಗೆ 12 ಕುಂಬಾಭಿಷೇಕ, ಲಕ್ಷಬಿಲ್ವಾರ್ಚನೆ ಪೂಜೆ ಸಲ್ಲಿಕೆಯಾಗಲಿದೆ. ಶ್ರಾವಣ ಮಾಸದ ಕೊನೆಯ ದಿನ ಮತ್ತೆ 108 ಕುಂಬಾಭಿಷೇಕ ಜರುಗಲಿದೆ.

ದೇವಾಲಯದಲ್ಲಿ ತ್ರಿಕಾಲ ಪೂಜೆ ಪ್ರಾರಂಭವಾಗಿದ್ದು, ಬೆಳಿಗ್ಗೆ 4ರಿಂದ ಬೆಳಿಗ್ಗೆ 6ರವರೆಗೆ ಮೊದಲ ಪೂಜೆ, ಅಭಿಷೇಕ, ಬಿಲ್ವಾರ್ಚನೆ, ಆರತಿ, 10.30ಕ್ಕೆ ಎರಡನೇ ಪೂಜೆ, ಸಂಜೆ 6.30ರಿಂದ ರಾತ್ರಿ 8.30ರವರೆಗೆ ಮೂರನೇ ಪೂಜೆ ಜರುಗಿದವು. ಅಲ್ಲದೆ ಈ ರಾತ್ರಿ 7ಕ್ಕೆ ಚಿನ್ನದ ತೇರಿನ ಉತ್ಸವ ವಿಭೃಂಜಣೆಯಿಂದ ಜರುಗಲಿದೆ.* ಮೆರವಣಿಗೆಯಲ್ಲಿ ಉಮಾಮಹೇಶ್ವರಿ, ನಂದಿಕಂಬ, ವೀರಗಾಸೆ ಕುಣಿತ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ ಎಂಬ ಜಯಘೋಷ ಹಾಕಿದರು,

ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ_ಮಾಸದ ಮೊದಲ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ. ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು. ಸಪ್ತ ಸಭಾ ದೇವತೆಗಳು ಕಳಸ ಉಮಾಮಹೇಶ್ವರ ಕಳಸ ಆವಾಹನೆ ಹಾಗೂ ಹೋಮಹವನ ಪೂಜೆಯನ್ನು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಶ್ರೀ ರಘು ಎ.ಇ, ಕ.ಆ.ಸೇ (ಹಿರಿಯ ಶ್ರೇಣಿ) ರವರು ನೇತೃತ್ವದಲ್ಲಿ ಹಾಗೂ ಬೇಡಗಂಪನ ಅರ್ಚಕರ ವತಿಯಿಂದ ಹಾಗೂ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳರವರ ಮತ್ತು ಗುಂಡೆಗಾಲದ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಾನಿತ್ಯದಲ್ಲಿ* 108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದ ಪೂಜೆ ವಿಜೃಂಭಣೆಯಿಂದ ನಡೆಯಿತು, ಮಹದೇಶ್ವರಬೆಟ್ಟ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಬಂದೋಬಸ್ತ್ ಕಲ್ಪಿಸಿದರು ಎಂದು ತಿಳಿಸಲಾಗಿದೆ .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago