ಕಲ್ಯಾಣಸಿರಿ ವಿಶೇಷ

ಲಯನ್ ಜಿಲ್ಲಾ 317ಎಫ್ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ; ಕೆ.ಸಿ. ಜನರಲ್ ಆಸ್ಪತ್ರೆಗೆ ವರ್ಷಪೂರ್ತಿ ಉಚಿತ ಊಟ ವಿತರಣೆಗೆ ನಿರ್ಧಾರ

Lion District 317F taking oath of office bearers; K.C. Decision to distribute free meals to General Hospital throughout the year

ಬೆಂಗಳೂರು, ಆ, 5; ಲಯನ್ ಜಿಲ್ಲಾ 317ಎಫ್ ನ 2024-25 ನೇ ಸಾಲಿನ ಕ್ಯಾಬಿನೆಟ್ ಪದಾಧಿಕಾರಿಗಳ ಪ್ರಮಾಣವಚನ ಸಮಾರಂಭದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆಗೆ ವರ್ಷಪೂರ್ತಿ ಉಚಿತ ಊಟ ವಿತರಣೆ ಸೇರಿದಂತೆ 40 ಕ್ಕೂ ಅಧಿಕ ಸೇವಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು.
ಬೆಂಗಳೂರು ನಿಮಾನ್ಸ್ ಕನ್ನೆನ್ನನ್ ಹಾಲ್ ನಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅಂತರಾಷ್ಟ್ರೀಯ ಲಯನ್ ಸಂಸ್ಥೆಯ ಮಾಜಿ ನಿರ್ದೇಶಕ ವಿ .ವಿಜಯಕುಮಾರ್ ರಾಜು, ಉಪರಾಜ್ಯಪಾಲ ಆಕಾಶ್ ವಿ ಸುವರ್ಣ, ರಾಜು ಚಂದ್ರಶೇಖರ್ ಪ್ರಮಾಣವಚನ ಬೋಧಿಸಿದರು.
ಅಂತರಾಷ್ಟ್ರೀಯ ಮಾಜಿ ನಿರ್ದೇಶಕರಾದ ಕೆ ವಂಶಿಧರ್ ಬಾಬು, ವಿ. ವಿ ಕೃಷ್ಣಾರೆಡ್ಡಿ, ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ 317ರ ಡಾ: ಎಸ್ ಕೃಷ್ಣಗೌಡ, ಜಿಲ್ಲಾ ಗವರ್ನರ್ ಸಿ.ಎಂ. ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ವಿತರಣೆ. ಹಸಿವು ನಿವಾರಣೆ ಕಾರ್ಯಕ್ರಮದ ಅಂಗವಾಗಿ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಒಂದು ವರ್ಷ ಉಚಿತ ಊಟದ ವ್ಯವಸ್ಥೆ, 51,108 ರೈನ್ ಕೋಟ್ ವಿತರಣೆ, ಪರಿಸರ ಸಂರಕ್ಷಣೆ, ಬಾಲಾವಸ್ಥೆ ಕ್ಯಾನ್ಸರ್ ತಡೆಗಟ್ಟಲು ನೆರವು, ದೃಷ್ಟಿ ದೋಷ ನಿವಾರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಮಾಧ್ಯಮ ಸಂಯೋಜಕರಾದ ಲಯನ್ ಸಿಂಹ ಶಾಸ್ತ್ರಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago