ಕಲ್ಯಾಣಸಿರಿ ವಿಶೇಷ

ಪ್ರೇಯಸಿ ಕೈ ಕೊಟ್ಟಿದ್ದಕ್ಕೆ ನೆಣಿಗೆ ಶರಣಾದ ಯುವಕ

A young man surrendered to the hand of his girlfriend.

ಕೊಪ್ಪಳ : (ಮಾನ್ವಿ) ಇನ್‌ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನತಾ ಹೌಸ್‌ನಲ್ಲಿ ಬುಧವಾರ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಜನತಾ ಹೌಸ್‌ನಲ್ಲಿ ಘಟನೆ ನಡೆದಿದ್ದು. ಮಾನ್ವಿ ನಿವಾಸಿ ವರುಣ್ ( 26) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಾವನ ಜೊತೆ ಪ್ರೇಯಸಿಯ ಮದುವೆ ನಿಶ್ಚಯವಾಗಿದ್ದಕ್ಕೆ ಖಿನ್ನತೆಗೊಳಗಾಗಿದ್ದ ಯುವಕ, ಮನೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್‌ಸ್ಟಾಗ್ರಾಂ ಮೂಲಕ ವರುಣ್‌ಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ರಾದಿಕ (ಹೆಸರು ಬದಲಿಸಲಾಗಿದೆ) ಎಂಬ ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಪರಿಚಯವಾಗಿ, ಅದು ಪ್ರೀತಿಯಾಗಿ ಅರಳಿತ್ತು.

ರಾಯಚೂರಿನಲ್ಲಿ 3 ವರ್ಷಗಳ ಕಾಲ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರಾದಿಕಾ ಮತ್ತಷ್ಟು ಹತ್ತಿರವಾಗಿದ್ದಳು. ಓದು ಮುಗಿಸಿ ಮನೆಗೆ ತೆರಳಿದ್ದ ರಾದಿಕಾಗೆ ಮನೆಯಲ್ಲಿ ನಾಲ್ಕೈದು ತಿಂಗಳ ಹಿಂದೆ ಮದುವೆ ನಿಶ್ಚಯ ಮಾಡಿದ್ದರು. ಹೀಗಾಗಿ ವರುಣ್‌ನನ್ನು ಯುವತಿ ದೂರ ಮಾಡಿದ್ದಳು. ಪ್ರೇಯಸಿ ದೂರವಾಗಿ, ಪ್ರೀತಿಸಿದ ಹುಡುಗಿ ದೂರವಾದಳು ಎಂಬ ಕಾರಕ್ಕ ಮನನೊಂದು ಕೊನೆಯ ಬಾರಿ ವಿಡಿಯೊ ಕಾಲ್ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವರುಣ್ ಶವ ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಪಂಚಯ್ಯ ಹಿರೇಮಠ,

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago