Gangavati: Progress review meeting of agricultural sakhiyas
ಗಂಗಾವತಿ: ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅಖಂಡ ಗಂಗಾವತಿ ತಾಲೂಕಿನ ಕೃಷಿ ಸಖಿಯರಿಗೆ ತ್ರೈಮಾಸಿಕ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಇದುವರೆಗೂ 97% ಗಂಗಾವತಿ ತಾಲೂಕು, 90% ಕಾರಟಗಿ, 88% ಕನಕಗಿರಿ ತಾಲೂಕಿನ ರೈತರ ಈಕೆವೈಸಿ ಮುಗಿದಿವೆ, ಇನ್ನು ಬಾಕಿ ಉಳಿದ ಪಿಜಿಕಲ್ ವೆರಿಪಿಕೆಶನ್, ಈಕೆ ವೈಸಿ ಪೂರ್ಣಗೊಳಿಸಲು ಕೃಷಿ ಸಖಿಯರಿಗೆ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಸಂತೋಷ್ ಪಟ್ಟದ್ಕಲ್ಲ್ ಸೂಚನೆ ನೀಡಿದ್ದಾರೆ. ಕೃಷಿ ಇಲಾಖೆಯ ಹಲವಾರು ಯೋಜನೆಗಳನ್ನು ಗ್ರಾಮೀಣ ಭಾಗದ ರೈತರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ಕೃಷಿ ಸಖಿಯರದ್ದು. ಎಲ್ಲಾ ರೈತರು ಈಕೆವೈಸಿ ಮಾಡಿಸಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಿ ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಸಂತೋಷ್ ಪಟ್ಟದ್ಕಲ್ಲ್, ಕೃಷಿ ಇಲಾಖೆಯ ಅಧಿಕಾರಿಗಳು, ಆತ್ಮ ಸಿಬ್ಬಂದಿಗಳು ಮತ್ತು ಮೂರು ತಾಲೂಕಿನ ಕೃಷಿ ಸಖಿಯರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…