ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ

Kalyana Karnataka Printers Association Sangathan


ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ೩೭೧ಜೆ ಇದ್ದರೂ ಸಹ ಇಲ್ಲಿನ ಜನರಿಗೆ, ಸಂಸ್ಥೆಗಳಿಗೆ ಉದ್ಯಮಿಗಳಿಗೆ ಸಹಾಯ ಸಿಗುತ್ತಿಲ್ಲ ಬದಲಾಗಿ ಅದರ ಲಾಭವೂ ಸಹ ಕೈತಪ್ಪಿ ಹೋಗುತ್ತಿರುವದರಿಂದ ಪ್ರಿಂಟರ್ ಸಂಘಟನೆ ಮಾಡಲಾಗುತ್ತಿದೆ ಎಂದು ಪ್ರಿಂಟರ್ ಆಗಿರುವ ಸಂಸ್ಥಾಪಕ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅನೇಕ ಮುದ್ರಣ ಸಂಸ್ಥೆ ಮಾಲೀಕರ ಜೊತೆಗೆ ಮೊದಲ ಹಂತದ ಮಾತುಕತೆ ಮಾಡಿದ್ದು ಶೀಘ್ರ ನೂತನ ಸಂಘಟನೆಯ ರೂಪುರೇಷೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡಲಾಗುವದು ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಸುಮಾರು ಸಾವಿರಕ್ಕೂ ಅಧಿಕ ಪ್ರಿಂಟಿAಗ್ ಪ್ರೆಸ್‌ಗಳಿದ್ದು ಅವುಗಳಿಂದ ಸುಮಾರು ಐದಾರು ಸಾವಿರ ಕುಟುಂಬಗಳು ಜೀವನ ನಡೆಸುತ್ತಿದ್ದು ಅವರ ರಕ್ಷಣೆ ಬಹಳ ಮುಖ್ಯವಾಗಿದೆ. ಮುದ್ರಣಕಾರರಿಗೆ ಲೇಬರ್ ಕಾರ್ಡ್ ಕೊಡಿಸುವದು, ಗ್ರೂಪ್ ಇನ್ಶೂರೆನ್ಸ್, ಕೋ-ಆಪರೇಟಿವ್ ಸೊಸೈಟಿ ರಚನೆ, ಈ ಏಳು ಜಿಲ್ಲೆಗಳ ಮುದ್ರಣಕಾರರಿಗೆ ಸರಕಾರಿ ಕೆಲಸಗಳಲ್ಲಿ ಮೀಸಲು, ಕೆಕೆಆರ್‌ಡಿಬಿ ಮುದ್ರಣ ಮೂಲಕ ಜಾರಿಯಾಗುವ ಮುದ್ರಣ ಮತ್ತು ಸ್ಟೇಷನರಿ ಕೆಲಸಗಳು ಇಲ್ಲಿನವರಿಗೆ ಕೆಲಸ ಸಿಗುವ ಕುರಿತು ಸರಕಾರದ ಮೂಲಕ ಅವಕಾಶ ಕಲ್ಪಿಸುವದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಂಘಟನೆ ನಿರ್ಣಯ ತೆಗೆದುಕೊಳ್ಳಲಿದೆ, ಹೆಚ್ಚಿನ ಮಾಹಿತಿಗೆ ಮಂಜುನಾಥ ಜಿ. ಗೊಂಡಬಾಳ ಮೊ: ೯೪೪೮೩೦೦೦೭೦ ಅವರನ್ನು ಸಂಪರ್ಕಿಸಿರಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago