Navali appointed to Karnataka State Youth Union
ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಆದೇಶ ಮಾಡಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು ಯುವ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಅವರ ನಿರ್ದೇಶನದಂತೆ ಯುವಜನ ಸಂಘಗಳ ಅಭಿವೃದ್ಧಿಗೆ ಎರಡು ದಶಕಗಳ ಕಾಲ ಕೆಲಸ ಮಾಡಿದ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡುವ ಮೂಲಕ ಜಿಲ್ಲೆಯಲ್ಲಿ ಯುವ ಸಂಘಗಳ ಪುನಶ್ಚೇತನಕ್ಕೆ ಹೊಸ ಮೈಲುಗಲ್ಲು ಸೃಷ್ಟಿಸುವ ಕಾರ್ಯ ನಡೆಯಲಿದೆ. ೨೦೦೮ ರಿಂದ ಯುವ ಸಂಘಗಳ ನೋಂದಣಿ ರದ್ದಾಗಿದ್ದು ಅವೆಲ್ಲವು ಜೀವ ಕಳೆದುಕೊಂಡಿವೆ, ಯುವಜನ ಮೇಳ ಮತ್ತು ಉತ್ಸವಗಳಲ್ಲಿ ಭಾಗವಹಿಸಲು ಸಹ ಸಂಘಗಳ ಸದಸ್ಯರಾಗುವದನ್ನು ಸಹ ತೆಗೆದು ಅವುಗಳಿಗೆ ಕೊಡುತ್ತಿದ್ದ ಆರ್ಥಿಕ ಸಹಾಯ ಎಲ್ಲವೂ ನಿಂತಿರುವದು ಸಮಾಜ ಸೇವೆ ಅನ್ನುವದು ಮೌಲ್ಯ ಕಳೆದುಕೊಂಡಿದೆ.
ಯುವ ಒಕ್ಕೂಟದಿಂದ ಕಲಬುರಗಿ ವಿಭಾಗ ಮಟ್ಟದಲ್ಲಿ ತಾಲೂಕ, ಜಿಲ್ಲೆ ಮತ್ತು ವಿಭಾಗೀಯ ಯುವಜನ ಸಾಂಸ್ಕೃತಿಕ ಮೇಳ, ಯುವ ಸಮಾವೇಶ, ಯುವ ಉದ್ಯೋಗ ಭರವಸೆ ತರಬೇತಿ, ಪ್ರತಿ ಗ್ರಾಮದಲ್ಲಿ ಯುವ ಸಂಘಗಳ ಮೂಲಕ ಯುವ ಸಮುದಾಯ ಭವನ, ನಿರಂತರ ಶ್ರಮದಾನ ಶಿಬಿರ, ಆರೋಗ್ಯ ಮೇಳ, ಯೋಗ ಕರಾಟೆ ತರಬೇತಿ, ಸಂಗೀತ ಕಾರ್ಯಕ್ರಮಗಳನ್ನು ಸಂಘಟಿಸಲು ಸ್ಪಷ್ಟವಾದ ಯೋಜನೆ ರೂಪಿಸಲಾಗಿದೆ ಎಂದು ಗೊಂಡಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…