Barber stabbed to death for refusing to cut Dalit’s hair
ಕೊಪ್ಪಳ : ದಲಿತನೆಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಶನಿವಾರದಂದು ನಡೆದಿದೆ,,,
ಸಂಗನಾಳ ಗ್ರಾಮದ ಯಮನೂರಪ್ಪ ಈರಪ್ಪ ಬಂಡಿಹಾಳ (23) ಮೃತ ಯುವಕ.
ಇದೇ ಗ್ರಾಮದ ಮುದಕಪ್ಪ ಅಂದಪ್ಪ ಹಡಪದ ಹತ್ಯೆ ಮಾಡಿದ ಆರೋಪಿ.
ಯಮನೂರಪ್ಪ ಶನಿವಾರದಂದು ಬೆಳಿಗ್ಗೆ ಮುದಕಪ್ಪನ ಕ್ಷೌರದಂಗಡಿಗೆ ಕಟಿಂಗ್ ಮಾಡಿಸಲು ಹೋದ ವೇಳೆ ನೀನು ಹರಿಜನ ನಿನಗೆ ಕ್ಷೌರ ಮಾಡುವುದಿಲ್ಲಾ ಎಂದು ಮುದಕಪ್ಪ ಹೇಳಿದ್ದಾನೆ.
ಇದರಿಂದ ಪರಸ್ಪರ ಇಬ್ಬರೂ ಮಾತಿಗೆ ಮಾತು ಬೆಳೆಸಿದ್ದು ಮುದಕಪ್ಪ ಅಂಗಡಿಯಲ್ಲಿರುವ ಕತ್ತರಿಯಿಂದ ಯಮನೂರಪ್ಪನ ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ.
ಈ ವೇಳೆ ತೀವ್ರ ರಕ್ತ ಸ್ರಾವದಿಂದ ಯುವಕ ಸ್ಥಳದಲ್ಲಯೇ ಮೃತ ಪಟ್ಟಿದ್ದಾನೆ.
ಈ ಕುರಿತು ಮೃತ ಯುವಕನ ಸಹೋದರ ಹನುಮಂತಪ್ಪ ಯಲಬುರ್ಗಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಮುದುಕಪ್ಪನನ್ನು ಪೋಲಿಸರು ಬಂದಿಸಿದ್ದಾರೆ. ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ರಾಮ ಎಲ್. ಅರಸಿದ್ದಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರೀಶಿಲಿಸಿದ್ದಾರೆ. ಸ್ಥಳದಲ್ಲಿ ಉದ್ವೀಗ್ನ ಪರಸ್ಥಿತಿ ಕಂಡು ಬಂದಿದೆ.
ವರದಿ:ಪಂಚಯ್ಯ ಹಿರೆಮಠ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…