Categories: ರಾಜಕೀಯ

ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಸಚಿವ ತಂಗಡಗಿ ಚಾಲನೆ

Call the governor back letter movement, Minister Thadagagi drive

ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ವಾಪಾಸ್ ಕರೆಸಿಕೊಳ್ಳಿ ಎಂಬ ಪತ್ರ ಚಳುವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಚಾಲನೆ ನೀಡಿದರು.
ನಗರದಲ್ಲಿ ರಾಜ್ಯಪಾಲರ ವಿರುದ್ಧ ನಡೆದ ಪ್ರತಿಭಟನೆ ನಂತರ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಅವರು ಆರಂಭಿಸಿರುವ ಸದರಿ ಪತ್ರ ಚಳುವಳಿಗೆ ಚಾಲನೆ ನೀಡಿದ ಸಚಿವರು, ಇದು ವಿಶೇಷವಾದ ಕಾರ್ಯಕ್ರಮವಾಗಿದೆ, ಜನರಿಗೆ ಜಾಗೃತಿ ಮೂಡಿಸುವ ಜೊತೆಗೆ ನಮ್ಮ ಹಕ್ಕನ್ನು ಪ್ರತಿಪಾದಿಸಲು ಸೂಕ್ತವಾಗಿದೆ, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಗಳನ್ನು ಬರೆದು ರಾಷ್ಟ್ರಪತಿಗಳನ್ನು ಒತ್ತಾಯಿಸಬೇಕು ಎಂದು ಕರೆ ನೀಡಿದರು.
ಪತ್ರದಲ್ಲಿ ದೇಶದ ಪ್ರಥಮ ಪ್ರಜೆ, ಕಾನೂನು ಸ್ಥಾಪಿತ ಹುದ್ದೆಯಲ್ಲಿರುವ ರಾಷ್ಟ್ರಪತಿಗಳು ಮಾತ್ರ ಪ್ರಸ್ತುತ ದೇಶಕ್ಕೆ ಕೊನೆಯ ಆಸರೆಯಂತೆ ಕಾಣಿಸುತ್ತಿದ್ದೀರಿ ಅದಕ್ಕಾಗಿ ತಮ್ಮಲ್ಲಿ ಅತ್ಯಂತ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ದಯಮಾಡಿ ಒಂದು ಪಕ್ಷ ಮತ್ತು ಧರ್ಮಕ್ಕೆ ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಳೆಯುತ್ತಿರುವ ರಾಜ್ಯಪಾಲರನ್ನು ಮರಳಿ ಕರೆಸಿಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದಿದ್ದಾರೆ.
ರಾಜ್ಯಪಾಲರು ಪ್ರತಿಯೊಬ್ಬರಿಗೂ ಅಂತಹದ್ದೇ ಕಾನೂನು, ನಿರ್ಣಯ ಮತ್ತು ಸಮಾನತೆಯಿಂದ ನೋಡಿಕೊಂಡಿದ್ದರೆ ಇಂತಹ ಪತ್ರದ ಅಗತ್ಯ ಬೀಳುತ್ತಿರಲಿಲ್ಲ, ಇದು ಅತ್ಯಂತ ಹೇಯ ಮತ್ತು ಭಾರತೀಯರ ನಂಬಿಕೆಗೆ ಸಂವಿಧಾನದ ಆಶಯಕ್ಕೆ ಘಾಸಿ ಉಂಟು ಮಾಡುವ ಸಂಗತಿಯಾಗಿದೆ.
ಕೊಪ್ಪಳ ಜಿಲ್ಲೆಯಿಂದ ಸದರಿ ಪತ್ರ ಚಳುವಳಿಯ ಮೂಲಕ ತಮ್ಮ ಅವಗಾಹನೆಗೆ ಒಂದಿಷ್ಟು ಮಾಹಿತಿ ಗಮನಕ್ಕೆ ತರಲು ಬಯಸುತ್ತೇವೆ, ತುರ್ತಾಗಿ ಗಮನಿಸಿ ರಾಜ್ಯಗಳನ್ನು ಮತ್ತು ವಿರೋಧ ಪಕ್ಷಗಳನ್ನು ರಕ್ಷಿಸಿರಿ, ಬಿಜೆಪಿಯೇತರ ಹಲವು ರಾಜ್ಯಗಳಲ್ಲಿ ಅಲ್ಲಿನ ಆಡಳಿತಾರೂಢ ಪಕ್ಷಗಳಿಗೆ ರಾಜ್ಯಪಾಲರು ಅನಾವಶ್ಯಕ ಕಿರುಕುಳ ನೀಡುತ್ತಿದ್ದು ಇದು ತೀವ್ರ ಆಕ್ಷೇಪಾರ್ಹ ವಿಷಯವಾಗಿದೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಶಕ್ತಿಯುತವಾಗಿ ಬೆಳೆಯುತ್ತಿದ್ದು, ಇಲ್ಲಿ ಸಿದ್ದರಾಮಯ್ಯನವರು ಮತ್ತು ಡಿಕೆ ಶಿವಕುಮಾರ ಅವರ ನೇತೃತ್ವದಲ್ಲಿ ಬಡವರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ರಕ್ಷಣೆ ನೀಡುತ್ತಿದ್ದಾರೆ, ಇದರಿಂದ ಕಂಗಾಲಾಗಿರುವ ಬಿಜೆಪಿ ನಾಯಕರು ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯನವರ ವಿರುದ್ಧದ ಸುಳ್ಳು ಕೇಸಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಅನುಮತಿಸಿದ್ದು ಕೇವಲ ಹಗೆತನಕ್ಕೆ ಎಂದು ಭಾವಿಸಬೇಕಾಗುತ್ತದೆ, ಈ ಮುಂಚೆ ಕುಮಾರಸ್ವಾಮಿ ಅವರ ಮೇಲೆ ಇದ್ದ ಇಂತಹ ವಿಷಯ ಮುಚ್ಚಿಟ್ಟು ಯಾಕೆ ಈಗ ಮಾತ್ರ ಅಷ್ಟು ತುರ್ತಾಗಿ ಅನುಮತಿ ನೀಡಲಾಗಿದೆ ಎಂಬುದು ಗೊತ್ತಾಗಬೇಕು. ಪ್ರಾಸಿಕ್ಯೂಷನ್ ಅನುಮತಿ ಕೊಡುವ ಮೊದಲು ಎರಡು ದಿನ ರಾಜ್ಯದಲ್ಲಿ ಇರದ ರಾಜ್ಯಪಾಲರು ಯಾರನ್ನು ಭೇಟಿ ಮಾಡಿ ಅನುಮತಿ ತೆಗೆದುಕೊಂಡು ಬಂದರು ಎಂಬ ಮರ್ಮವೂ ಸಹ ರಾಜ್ಯಕ್ಕೆ ಗೊತ್ತಾಗಬೇಕು, ರಾಜ್ಯದ ಶಾಂತಿ ಸುವ್ಯಸ್ಥೆಯ ದೃಷ್ಟಿಯಿಂದ ರಾಜ್ಯಪಾಲರನ್ನು ಕೂಡಲೆ ಬದಲಿಸಲು ಆಗ್ರಹಿಸುತ್ತೇವೆ.
ರಾಜ್ಯಪಾಲರು ಬಿಜೆಪಿಯ ಏಜಂಟರಾಗಿ ಇಡಿ, ಐಟಿ ನಂತರ ಮತ್ತೊಂದು ಹೆದರಿಸುವ ದಾಳವಾಗಿದ್ದಾರೆ ಎನ್ನುವದು ಅತ್ಯಂತ ಸ್ಪಷ್ಟ ಮತ್ತು ನಾಚಿಕೆಗೇಡಿತನದ ಪರಮಾವಧಿಯಾಗಿದೆ, ಯಾಕೆ ಕೇವಲ ಬಿಜೆಪಿಯೇತರ ಪಕ್ಷಗಳ ನಾಯಕರು ಮಾತ್ರವೇ ಇವರ ಕಣ್ಣಿಗೆ ಬೀಳುತ್ತಾರೆ ಎಂಬುದನ್ನು ತಾವು ಪರಿಶೀಲಿಸಿ ದೇಶದಲ್ಲಿ ಸಮಾನತೆಗಾಗಿ ಒತ್ತಾಯಿಸಿ ಪತ್ರ ಬರೆದಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕೆ. ರಾಜಶೇಖರ್ ಹಿಟ್ನಾಳ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಮುಖಂಡರು ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ, ಮುಖಂಡರಾದ ಮಂಜುನಾಥ ಗೊಂಡಬಾಳ, ವಿಶಾಲಾಕ್ಷಿ ತಾವರಗೇರಾ, ಸೌಭಾಗ್ಯಲಕ್ಷ್ಮೀ ಗೊರವರ್, ರಜಿಯಾ ಮನಿಯಾರ್, ಭಾಷಾ ಹಿರೇಮನಿ, ಲಿಂಗರಾಜ ಅಗಳಕೇರಿ, ಜಿಲಾನ್ ಕಿಲ್ಲೇದಾರ್, ಜಾಫರ್ ತಟ್ಟಿ ಅನೇಕರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago