ನುಲಿಯ ಚಂದಯ್ಯ ಕಲ್ಯಾಣ ನಾಡಿನ ಶ್ರೇಷ್ಠ ಶರಣ”
*Nuli Chandaiya who said sports loyalty is the best : K Kotresh *
ಕೊಟ್ಟೂರು ಪಟ್ಟಣ ಪಂಚಾಯಿತಿಕಾರ್ಯಾಲಯದಲ್ಲಿ
ಸೋಮವಾರ ರಂದು ನಡೆದ 917ನೇ ನುಲಿಯ ಚಂದಯ್ಯ ಜಯಂತಿಯನ್ನು ಆಚರಿಸಲಾಯಿತು.
ಸಮಾಜದ ಮುಖಂಡರಾದ ಅಖಿಲ ಕರ್ನಾಟಕ ಕುಳವ ಮಹಾ ಸಂಘದ ರಾಜ್ಯ ಉಪ ಕಾರ್ಯದರ್ಶಿ ಕೆ.ಕೊಟ್ರೇಶ್ ಅವರು ಮಾತನಾಡಿ ಹನ್ನೆರಡನೇ ಶತಮಾನದಲ್ಲಿ ಕಾಯಕಕ್ಕೆ ಒತ್ತು ನೀಡುವ ಮೂಲಕ ಕೊರಚ, ಕೊರವ ಕೊರಮ ಸಮುದಾಯದ ಸಾಂಸ್ಕೃತಿಕ ಪ್ರತಿನಿಧಿಯಾಗಿ ಕಾಯಕದ ಮಹತ್ವವನ್ನು ಸಾರಿದ ನುಲಿಯ ಚಂದಯ್ಯನವರು ಕಾಯಕದಲ್ಲಿಯೇ ದೇವರನ್ನು ಕಂಡ ಮಹಾಶರಣರು
ಕಲ್ಯಾಣ ನಾಡಿನ ಶ್ರೇಷ್ಠ ಶರಣ, ಅನುಭಾವಿ, ವಚನಕಾರ ನುಲಿಯ ಚಂದಯ್ಯನವರು ಕಾಯಕ ನಿಷ್ಠೆ ಶಿವನಿಗೆ ಅರ್ಪಿತವಾಗುತ್ತದೆ ಎಂದು ಅಚಲವಾಗಿ ನಂಬಿ ಅದರಂತೆ ನಡೆದರು. ಪೂಜೆ, ಪುನಸ್ಕಾರಗಳಿಗಿಂತ ಕಾಯಕ ನಿಷ್ಠೆಯೇ ಮೇಲು ಎಂದು ಸಾರಿದವರು. ಅಂತಹ ಮಹಾನ್ ಶರಣರ ಮೌಲ್ಯಗಳನ್ನು ಜೀವನ ದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ನಂತರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ ನಸ್ರುಲ್ಲಾ ಅವರು ಮಾತನಾಡಿ ನುಲಿಯ ಚಂದಯ್ಯ 12ನೇ ಶತನಮಾನದ ದಾರ್ಶನಿಕ, ಬಸವಾದಿ ಶರಣ ಸಮೂಹದ ವಚನಕಾರನಾಗಿದ್ದು, ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ .ಎಂದರು
ಈ ಕಾರ್ಯಕ್ರಮದಲ್ಲಿ ತಾಲೂಕು ಕುಳವ ಸಮಾಜದ ಅಧ್ಯಕ್ಷರಾದ ಮಂಜುನಾಥ ಭಜಂತ್ರಿ, ಪಕ್ಕೀರಪ್ಪ ಮುಖಂಡರು, ಭತ್ತನಹಳ್ಳಿ ದುಗ್ಗಪ್ಪ, ದ್ಯಾಮಪ್ಪ, ಪರಶುರಾಮ್,ನಾಗರಾಜ , ತಾಲೂಕು ಉಪಾಧ್ಯಕ್ಷ ಕಾಂತಪ್ಪ,ಆರುಬಳ್ಳು ಕೊಟ್ರೇಶ್, ಈಶ್ವರ,ಗಾಳೇಪ್ಪ,ಗಜಾಪುರ ಮಲ್ಲಿಕಾರ್ಜುನ್, ಉಜ್ಜಿನಿ ಹನುಮಂತಪ್ಪ,ಮುಂತಾದವರು ಹಾಜರಿದ್ದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಭಾವಿಕಟ್ಟಿ ಶಿವನಾಂದ,ಪಟ್ಟಣ ಪಂಚಾಯಿತಿ ಇಂಜಿನಿಯರ್ ಬಿರಾದಾರ್ ,ಅನುಷಾ ಆರ್ ಐ ಕೊಟ್ರೇಶ್, , ಪರಶುರಾಮ್,ಮಂಜುನಾಥ,ವಿಜ್ಜಣ್ಣ
ಇತರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…