ಕಲ್ಯಾಣಸಿರಿ ವಿಶೇಷ

ಸಿ.ಎಸ್.ಎಫ್. ಆವರಣದಲ್ಲಿ ಶಾಸನ ಪತ್ತೆ

CSF Inscription found in premises

ಸಿಂಧನೂರು : ಸಿ.ಎಸ್.ಎಫ್. ಆವರಣದಲ್ಲಿ ಶಾಸನ
ಪತ್ತೆಯಾದ ಶಾಸನವನ್ನು ಇತಿಹಾಸ ಉಪನ್ಯಾಸಕ ಹಾಗೂ ಸಂಶೋಧಕ ಡಾ. ಚನ್ನಬಸಪ್ಪ ಮಲ್ಕಂದಿನ್ನಿ ಯವರು ಸಂಶೋದಿಸಿದ್ದಾರೆ. ಈ ಶಾಸನವು ಬೆಣಚುಕಲ್ಲಿನ ಶಿಲೆಯದಾಗಿದ್ದು, ಕ್ರಿ.ಶ. 13ನೇ ಶತಮಾನಕ್ಕೆ ಸೇರುತ್ತದೆ. ಇದು ಕನ್ನಡ ಭಾಷೆ ಕನ್ನಡ ಲಿಪಿಯಲ್ಲಿದ್ದು, ಒಂಬತ್ತು ಸಾಲುಗಳಿಂದ ರಚಿತವಾಗಿದೆ. ಇದರಲ್ಲಿ ಹಿರಿಯ ಗೊಬ್ಬರ (ಪ್ರಸ್ತುತ ದೇವದುರ್ಗ ತಾಲ್ಲೂಕಿನ ಗಟ್ಟೂರು ಗ್ರಾಮ) ಜನ್ನಯ್ಯಭಟ್ಟ, ರಾರಾವಿಯ (ಬಳ್ಳಾರಿ ಜಿಲ್ಲೆಯ ಗ್ರಾಮ) ಜನ್ನಯ್ಯಭಟ್ಟರ ವೃತ್ತಿಗೆ ಹಾಗೂ ಕೌಶಿಕ ಗೋತ್ರದ ಸಾಕಮದ ವಂಕಣ ಭಟ್ಟರ ಮಕ್ಕಳಾದ ದಾಮೋದರ ಭಟ್ಟರಿಗೆ ಹಿರಿಯ ಬೆಳ್ಳಹಾರದ (ಪ್ರಸ್ತುತ ಒಳಬಳ್ಳಾರಿ ಗ್ರಾಮ) ಅಶೇಷ ಮಹಾಜನರು ಆದಿತ್ಯದೇವರ ಗಡಿಂಬದಲಿ ಅಳೆದು ಎರಡು ಮತ್ತರು ಭೂಮಿಯನ್ನು ಮದುವೆಯ ಕಾಲದಲ್ಲಿ ಪ್ರೀತಿಯ ದಾನವಾಗಿ ನೀಡಿದ ಬಗ್ಗೆ ದಾಖಲಿಸುತ್ತದೆ.

ಶಾಸನದ ಮೇಲ್ಬಾಗದಲ್ಲಿ ಕಳಚೂರಿ ಅರಸರ ಲಾಂಛನವಾದ ನಂದಿ, ಕತ್ತಿಯ ಜೊತೆಗೆ ವಾಮನನ ವಿಗ್ರಹವಿದೆ, ಇದರಿಂದ ತಿಳಿದು ಬರುವದೇನೆಂದರೆ ಇದು ಸ್ಮಾರ್ತ ಬ್ರಾಹ್ಮಣರ ಪರಂಪರೆಗೆ ಸೇರಿದ್ದಾಗಿದೆ. ವಾಮನನು ತನ್ನ ಎಡಗೈಯಲ್ಲಿ ಕೊಡೆಯನ್ನು, ಬಲಗೈಯಲ್ಲಿ ತೀರ್ಥದ ಕುಂಡಲವನ್ನು ಹಿಡಿದಿದ್ದಾನೆ. ಈತನು ತನ್ನ ಹಣೆಗೆ ಗಂಧದ ಲೇಪನ, ಕಚ್ಚೆ ದೋತರ ಧರಿಸಿದ್ದು ಕಾಣಬರುತ್ತದೆ. ಇದರ ಮೇಲ್ಬಾಗದಲ್ಲಿ ಚಂದ್ರ, ಸೂರ್ಯನ ಶಿಲ್ಪಗಳಿವೆ. ಈ ಶಾಸನದ ಕ್ಷೇತ್ರಕಾರ್ಯದಲ್ಲಿ ಸಿಎಸ್.ಎಫ್ ನ ನಿರ್ದೇಶಕರಾದ ವಿನಯಕುಮಾರ, ಮ್ಯಾನೇಜರ್‌ರಾದ ಅರುಣಕುಮಾರ, ಇಂಜನೀಯರ್‌ರಾದ ಚೇತನ್ ಕುಮಾರ ಹಾಗೂ ನೌಕರರಾದ ಅಯ್ಯಪ್ಪ, ವೆಂಕೋಬ, ಶಿವಪ್ಪ ಮತ್ತು ನನ್ನ ವಿದ್ಯಾರ್ಥಿಗಳಾದ ಹುಸೇನಪೀರ್ ಮಲ್ಲಿಗಿಮಡುವು, ಸುರೇಶ ತುರಕಟ್ಟಿಕ್ಯಾಂಪ್ ಮೊದಲಾದವರು ನೆರವಾಗಿದ್ದರೆಂದು ಸಂಶೋಧಕರು ಪತ್ರಿಕೆಗೆ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago