ಕಲ್ಯಾಣಸಿರಿ ವಿಶೇಷ

ಮುಡಾ ಹಗರಣ ತನಿಖೆ – ಮೂರು ಪಕ್ಷದ ನಾಯಕರಿಗೆ ಭಯ ?

Muda Scam Investigation – Three Party Leaders Are Afraid?

ಮೈಸೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಸಿಕ್ಕಿದ ಕೂಡಲೇ ಇತ್ತ ಮೂಡಾ ಹಗರಣದ ತನಿಖೆಯೂ ಚುರುಕು ಪಡೆದಿದೆ. ವಿಚಾರಣೆಯ ಚುರುಕಿಗೆ ಸಿದ್ದರಾಮಯ್ಯ ಹೆದರಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮೈಸೂರಲ್ಲಿ ಬಹಳಷ್ಟು ರಾಜಕಾರಣಿಗಳಿಗೆ ನಡುಕ ಶುರುವಾಗಿದೆ.

ಮೂಡಾ ಹಗರಣದ ಕೇಂದ್ರ ಬಿಂದುವೇ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಆಗಿರುವ ೫೦:೫೦ ಅನುಪಾತದ ಸೈಟ್‌ಗಳು. ಮೇಲ್ನೋಟಕ್ಕೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪರ‍್ವತಿ ಅವರಿಗೆ ಬಂದಿರುವ ೧೪ ಸೈಟ್‌ಗಳ ವಿಚಾರ ಮಾತ್ರ ಹೆಚ್ಚು ರ‍್ಚೆಯಲ್ಲಿದೆ. ಆದರೆ ಇದೇ ಅನುಪಾತದಲ್ಲಿ ೨೦೧೮ರಿಂದ ಇಲ್ಲಿಯವರೆಗೂ ಮಂಜೂರಾಗಿರುವ ಸೈಟ್‌ಗಳ ಸಂಖ್ಯೆ ಸಾವಿರ ದಾಟುತ್ತಿದೆ. ಅಲ್ಲಿಗೆ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್‌ನ ಎಲ್ಲಾ ಮುಖಂಡರು, ಜನಪ್ರತಿನಿಧಿಗಳು ಇದರಲ್ಲಿ ಪಾಲುದಾರರಾಗಿರುವುದು ಸ್ಪಷ್ಟವಾಗಿದೆ. ಇದನ್ನೂ ಓದಿ: ತಂದೆ ಮಾಡದ ತಪ್ಪಿಗೆ ಈ ರೀತಿ ಆರೋಪಕ್ಕೆ ಗುರಿಯಾಗಿದ್ದು ಬೇಸರ ತರಿಸಿದೆ: ಯತೀಂದ್ರ ಭಾವುಕ

ಸಿಎಂ ಅವರ ಕುಟುಂಬಕ್ಕೆ ೫೦:೫೦ ಅನುಪಾತದಲ್ಲಿ ಸೈಟ್ ಸಿಕ್ಕಿರುವಾಗ ತಮಗೆ ಬಂದಿರುವ ಸೈಟ್‌ಗಳಿಗೆ ಯಾವ ತೊಂದರೆಯೂ ಇಲ್ಲ ಎಂದು ಬಹಳಷ್ಟು ಜನ ಅಂದುಕೊಂಡಿದ್ದರು. ಆದರೆ ತನಿಖೆ ಸಾಗುತ್ತಿರುವ ರೀತಿ ನೋಡಿದರೆ ಇವತ್ತಲ್ಲ ನಾಳೆ ಎಲ್ಲರ ಬಂಡವಾಳಗಳು ಬಯಲಾಗಲಿದೆ.

ತನಿಖೆಯಲ್ಲಿ ಯಾರು ಯಾರು ಪ್ರಭಾವದ ಮೇಲೆ ಸೈಟ್ ಪಡೆದಿದ್ದಾರೆ. ಯಾರ ಹೆಸರಲ್ಲಿ ಯಾರು ಬೇನಾಮಿ ಆಗಿದ್ದಾರೆ ಎನ್ನುವುದು ಸ್ಪಷ್ಟವಾಗಿ ಬಿಟ್ಟರೆ ಎಲ್ಲಿ ರ‍್ಯಾದೆ ಮೂರು ಪಾಲಾಗುತ್ತೆ ಎನ್ನುವ ಭಯ ೫೦:೫೦ ಅನುಪಾತದ ಅಡಿ ಸೈಟ್ ಪಡೆದವರಲ್ಲಿ ಶುರುವಾಗಿದೆ. ರ‍್ಯಾದೆ ಜೊತೆ ಸೈಟ್‌ಗಳು ಜಪ್ತಿ ಆದರೆ ಕಥೆ ಏನು ಎನ್ನುವುದು ಬಹಳಷ್ಟು ಜನರ ಆತಂಕಕ್ಕೆ ಕಾರಣವಾಗಿದೆ.

ಒಟ್ಟಾರೆ ಮೂಡಾ ಹಗರದ ತನಿಖೆ ಜೋರಾಗುತ್ತಿದ್ದಂತೆ ಹಲವರಲ್ಲಿ ಭಯವಂತ ಶುರುವಾಗಿದೆ. ಈ ತನಿಖೆಯ ಮೂಲಕ ಮೂಡಾ ಸ್ವಚ್ಛವಾದರೆ ಸಾಕು ಎನ್ನುತ್ತಿದ್ದಾರೆ ಮೈಸೂರಿನ ಪ್ರಜ್ಞಾವಂತ ಜನರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago