A student of Sir CV Raman School who was awarded as the best child artist
ಗಂಗಾವತಿ : ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗದಗ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡಮಿ ಧಾರವಾಡ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಚಿಣ್ಣರ ಚಿತ್ರ ಚಿತ್ತಾರ 2023-24ರ ರಾಷ್ಟ್ರಮಟ್ಟದ ಮಕ್ಕಳ ಚಿತ್ರ ಕಲೋತ್ಸವದಲ್ಲಿ ಬಸಾಪಟ್ಟಣ ಗ್ರಾಮದ ಸರ್ ಸಿ.ವಿ ರಾಮನ್ ಪಬ್ಲಿಕ್ ಶಾಲೆ 5ನೇ ತರಗತಿಯ ವಿದ್ಯಾರ್ಥಿ ಹರೀಶ್ ಬಿ ಇವರು ಬಿಡಿಸಿರುವ ಕಲಾಕೃತಿಗೆ ಉತ್ತಮ ಬಾಲ ಕಲಾವಿದ ವಿಭಾಗದಲ್ಲಿ ಆಯ್ಕೆಯಾಗಿ ಪ್ರಶಸ್ತಿ ಸ್ವೀಕರಿಸಿ ಶಾಲೆಗೆ ಕಿರ್ತಿ ತಂದಿದ್ದಾರೆ. ಹಾಗೂ ಶಾಲೆಯಿಂದ ಸುಮಾರು 130 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ರಾಷ್ಟ್ರಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಮಕ್ಕಳ ಚಿತ್ರಕಲೋತ್ಸವದಲ್ಲಿ ಭಾಗವಹಿಸಲು ನಮ್ಮ ಶಾಲೆಯ ಸಹ ಶಿಕ್ಷಕಿ ಚನ್ನಬಸಮ್ಮ ಇವರಿಗೆ ಉತ್ತಮ ದೃಶ್ಯಕಲಾ ಚಿಂತನಕಾರ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದಿರುವ ವಿದ್ಯಾರ್ಥಿ ಹರೀಶ್ ಬಿ ಹಾಗೂ ಸಹ ಶಿಕ್ಷಕಿಗೆ ಇವರಿಗೆ ಶಾಲಾ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವರ್ಗದಿಂದ ವಿದ್ಯಾರ್ಥಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…