Breaking News

ರೈತ ಸಂಘದಿಂದ ಧಿಕ್ಕಾರ ಕೂಗಿ ಸಭೆ ಬಹಿಷ್ಕಾರ*ರೈತ ಸಂಘದಿಂದ ಧಿಕ್ಕಾರ ಕೂಗಿ ಸಭೆ ಬಹಿಷ್ಕಾರ

Boycott the meeting after shouting contempt from the farmer’s association * Boycott the meeting after shouting contempt from the farmer’s association

ಜಾಹೀರಾತು
WhatsApp Image 2024 08 22 At 9.20.02 AM 300x164

ಮಾನ್ವಿ : ಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ರಸಗೊಬ್ಬರ ,ಕೀಟನಾಶಕ ಮತ್ತು ಬಿತ್ತನೆ ಬೀಜಗಳ ಮಾರಾಟಗಾರರ ಸಭೆಯನ್ನು ತಾಲೂಕು ಕೃಷಿ ಸಹಾಯಕ ನಿರ್ದೇಶಕರಾದ ಗುರುನಾಥ ಭೂಸನೂರ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾನವಿ, ಸಿರವಾರ ಹಾಗೂ ಮಸ್ಕಿ ತಾಲ್ಲೂಕಿನಲ್ಲಿ ರಸಗೊಬ್ಬರ,ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಮಾರಾಟಗಾರರು 220 ಅಂಗಡಿ ಮಾಲೀಕರು ಆಗಮಿಸಬೇಕಾಗಿತ್ತು. ಮತ್ತು ಹಿರೇಕೊಟ್ನೆಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಶ ಸಭೆಗೆ ಗೈರು ಹಾಜರಾಗಿದ್ದರು ಮತ್ತು ಕೇವಲ 100 ಮಳಿಗೆಯ ಮಾಲೀಕರು ಸಭೆಯಲ್ಲಿ ಹಾಜರಾಗಿದ್ದರು. ಇನ್ನೂ ಉಳಿದ ಮಾಲೀಕರು ಗೈರು ಆದ ಕಾರಣ ಇದನ್ನು ಖಂಡಿಸಿ ರೈತ ಸಂಘದ ಮುಖಂಡರು ಹಾಗೂ ಸದಸ್ಯರು ಆಕ್ರೋಶ ಗೊಂಡು ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ಹಾಗೂ ರೈತರಿಗೆ ಮಳಿಗೆ ಮಾಲೀಕರು ಅವಮಾನ ಮಾಡಿದ್ದಾರೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಸಭೆಗೆ ಬಹಿಷ್ಕಾರ ಹಾಕಿದ್ದರು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಜಿಲ್ಲಾಧ್ಯಕ್ಷೆ ಅನಿತಾ ನವಲಕಲ್, ಬಸವರಾಜ ನಾಯಕ ಹಿರೇಕೊಟ್ನೆಕಲ್, ಶರಣಬಸವ ನಾಯಕ ಜಾನೇಕಲ್, ಬುಡ್ಡಪ್ಪ ನಾಯಕ, ಅಮರೇಶ ಗೌಡ, ಜಾವೀದ್ ಖಾನ್ ಹೊಳೆಯಪ್ಪ ಉಟಕನೂರು, ಸೇರಿದಂತೆ ರೈತ ಮುಖಂಡ ಹಾಗೂ ಕೃಷಿ ಅಧಿಕಾರಿಗಳು ಅಂಗಡಿ ಮಾಲೀಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.