ಕಲ್ಯಾಣಸಿರಿ ವಿಶೇಷ

ರೈತ ಸಂಘದಿಂದ ಧಿಕ್ಕಾರ ಕೂಗಿ ಸಭೆ ಬಹಿಷ್ಕಾರ*ರೈತ ಸಂಘದಿಂದ ಧಿಕ್ಕಾರ ಕೂಗಿ ಸಭೆ ಬಹಿಷ್ಕಾರ

Boycott the meeting after shouting contempt from the farmer’s association * Boycott the meeting after shouting contempt from the farmer’s association

ಮಾನ್ವಿ : ಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ರಸಗೊಬ್ಬರ ,ಕೀಟನಾಶಕ ಮತ್ತು ಬಿತ್ತನೆ ಬೀಜಗಳ ಮಾರಾಟಗಾರರ ಸಭೆಯನ್ನು ತಾಲೂಕು ಕೃಷಿ ಸಹಾಯಕ ನಿರ್ದೇಶಕರಾದ ಗುರುನಾಥ ಭೂಸನೂರ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾನವಿ, ಸಿರವಾರ ಹಾಗೂ ಮಸ್ಕಿ ತಾಲ್ಲೂಕಿನಲ್ಲಿ ರಸಗೊಬ್ಬರ,ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಮಾರಾಟಗಾರರು 220 ಅಂಗಡಿ ಮಾಲೀಕರು ಆಗಮಿಸಬೇಕಾಗಿತ್ತು. ಮತ್ತು ಹಿರೇಕೊಟ್ನೆಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಶ ಸಭೆಗೆ ಗೈರು ಹಾಜರಾಗಿದ್ದರು ಮತ್ತು ಕೇವಲ 100 ಮಳಿಗೆಯ ಮಾಲೀಕರು ಸಭೆಯಲ್ಲಿ ಹಾಜರಾಗಿದ್ದರು. ಇನ್ನೂ ಉಳಿದ ಮಾಲೀಕರು ಗೈರು ಆದ ಕಾರಣ ಇದನ್ನು ಖಂಡಿಸಿ ರೈತ ಸಂಘದ ಮುಖಂಡರು ಹಾಗೂ ಸದಸ್ಯರು ಆಕ್ರೋಶ ಗೊಂಡು ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ಹಾಗೂ ರೈತರಿಗೆ ಮಳಿಗೆ ಮಾಲೀಕರು ಅವಮಾನ ಮಾಡಿದ್ದಾರೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಸಭೆಗೆ ಬಹಿಷ್ಕಾರ ಹಾಕಿದ್ದರು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಜಿಲ್ಲಾಧ್ಯಕ್ಷೆ ಅನಿತಾ ನವಲಕಲ್, ಬಸವರಾಜ ನಾಯಕ ಹಿರೇಕೊಟ್ನೆಕಲ್, ಶರಣಬಸವ ನಾಯಕ ಜಾನೇಕಲ್, ಬುಡ್ಡಪ್ಪ ನಾಯಕ, ಅಮರೇಶ ಗೌಡ, ಜಾವೀದ್ ಖಾನ್ ಹೊಳೆಯಪ್ಪ ಉಟಕನೂರು, ಸೇರಿದಂತೆ ರೈತ ಮುಖಂಡ ಹಾಗೂ ಕೃಷಿ ಅಧಿಕಾರಿಗಳು ಅಂಗಡಿ ಮಾಲೀಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago