MLA M.R. Manjunath, who has raised the stake for the Uduthore reservoir.
ವರದಿ : ಬಂಗಾರಪ್ಪ .ಸಿ .
ಹನೂರು :ಪ್ರತಿಯೊಂದು ಬೆಳೆಗೂ ನೀರೆ ಮುಖ್ಯ ಹಾಗಾಗಿ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .
ಹನೂರು ತಾಲ್ಲೋಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಸಂಬಂಧಿಸಿದಂತೆ ಗೇಟ್ ಗಳ ದುರಸ್ತಿ ಕಾರ್ಯದ ನಿಮಿತ್ತವಾಗಿ ಸಂಬಂಧಿಸಿದ ನೀರಾವರಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಕಲ್ಪಿಸುವ ಸದುದ್ದೇಶದಿಂದ ಮಾಡಲಾಗಿರುವ ಜಲಾನಯನ ಅಚ್ಚು ಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಒದಗಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಸ್ಯೆಗಳನ್ನು ವಿಸ್ತಾರವಾಗಿ ಅಧಿಕಾರಿಗಳ ಜೊತೆ ಮತ್ತು ನೀರಾವರಿ ಸಚಿವರ ಜೊತೆ ಚರ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಈ ಭಾಗದ ರೈತರಿಗೆ ಇದರ ಸದ್ಬಳಕೆ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಮೂಲಕ ಯೋಜನೆ ಸಿದ್ಧಪಡಿಸಲಾಗಿದೆ ಎಂದರು .
ನಾಲೆಗಳ ದುರಸ್ತಿಗೆ ಕ್ರಮ: ಎಡದಂಡೆ ಬಲದಂಡೆ ನಾಲೆಗಳ ಒಳಭಾಗದಲ್ಲಿ ಮತ್ತು ಮೇಲ್ಭಾಗದಲ್ಲಿ ಗಿಡ ಗಂಟೆಗಳು ಬೆಳೆದು ನಿಂತಿದ್ದು ಈ ಹಿಂದೆ ಹಲವಾರು ವರ್ಷಗಳಿಂದ ನಾಲೆಯಲ್ಲಿರುವ ರಾಡಿಗಳನ್ನು ಸ್ವಚ್ಛಗೊಳಿಸದೆ ಹಾಗೆ ಇರುವುದರಿಂದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಈ ಬಾರಿಯಾದರೂ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ್ , ಮುಖಂಡರುಗಳಾದ ಚಿನ್ನವೆಂಕಟ,ಬಾಬು,ಮುಸ್ತಪ್ಪ,ಡಿ.ಆರ್ ಮಾದೇಶ್,ವಿಜಯ್ ಕುಮಾರ್,,ಅತಿಕ್,ಶಿವರುದ್ರ, ಎಸ್.ಆರ್ ಮಹಾದೇವ್,ಸುರೇಶ್,ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು..
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…