Breaking News

ಪತ್ನಿ ನಿಧನದ ಸುದ್ದಿ ಕೇಳಿ ಪತಿಯೂ ಮೃತಪಟ್ಟ ಧಾರುಣ ಘಟನೆ

An incident where the husband also died after hearing the news of his wife’s death.

ಜಾಹೀರಾತು
IMG 20240824 WA0396 300x164


ವರದಿ : ಬಂಗಾರಪ್ಪ ಸಿ .
ಹನೂರು :ತಾಲ್ಲೂಕು ವ್ಯಾಪ್ತಿಯಲ್ಲಿ ಮಂಗಲ ಗ್ರಾಮದ ಲ್ಲಿಪತ್ನಿ ನಿಧನದ ಸುದ್ದಿ ಕೇಳಿ ಪತಿಗೆ ಹೃದಯಾಘಾತ:‌ ಸಾವಿನಲ್ಲೂ ಒಂದಾದ ದಂಪತಿಯು
ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಆದರ್ಶ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಶೇಖರ್ (70) ಹಾಗೂ ಸುಮಿತ್ರಮ್ಮ (65) ಎಂದು ಮೃತ ದಂಪತಿಗಳು‌. ದಂಪತಿಗಳಿಬ್ಬರು ಕೃಷಿಕರಾಗಿದ್ದು ಮಂಗಲ ಸಮೀಪದ ರಾಮನಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಶೇಖರ್ ರವರ ಪತ್ನಿ ಸುಮಿತ್ರಮ್ಮ ಗೆ ಶುಕ್ರವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕಾಮಗೆರೆ ಬಳಿ ಇರುವ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಿತ್ರಮ್ಮ ಶುಕ್ರವಾರ ರಾತ್ರಿ ಮೃತಪಟ್ಟಿದ್ದು ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಶೇಖರ್ ಕೂಡ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಜೀವನ ಜಂಜಾಟದಲ್ಲಿ ಒಂದಾಗಿದ್ದ ದಂಪತಿಗಳು ಸಾವಿನಲ್ಲೂ ಒಂದಾಗಿರುವುದು ಇವರ ಆದರ್ಶ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.