ಕಲ್ಯಾಣಸಿರಿ ವಿಶೇಷ

ಸದೃಡ ಕಾಯಕ್ಕೆ ಕ್ರೀಡೆ ಅವಶ್ಯ : ಗೌರಮ್ಮ ನಾಗನೂರ ಅಭಿಮತ

Exercise is essential for a healthy body: Gouramma Naganoor Abhimata

ಬನ್ನಿಕೊಪ್ಪದಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟ,,,


ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ವಿದ್ಯಾರ್ಥಿಗಳು ಕ್ರೀಡೆ, ಯೋಗ ಶಿಬಿರಗಳಲ್ಲಿ ಪಾಲ್ಗೋಳ್ಳುವ ಮೂಲಕ ಸದೃಡ ಕಾಯವನ್ನು ರೂಪಿಸಿಕೊಳ್ಳುವಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಎಂದು ಮಾಜಿ ತಾಲೂಕ ಪಂಚಾಯತಿ ಸದಸ್ಯೆ ಗೌರಮ್ಮ ನಾಗನೂರು ಹೇಳಿದರು.

ಅವರು ಕುಕನೂರು ತಾಲೂಕಿನ ಬನ್ನಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ತಳಕಲ್ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ದ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಂತರದಲ್ಲಿ ಶಿಕ್ಷಕ ಬಸವರಾಜ ಮೇಟಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೋಳ್ಳಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಸೋಲೆ ಗೆಲುವಿನ ಸೋಪಾನ ಎನ್ನುವ ನಾಣ್ಣುಡಿಯಂತೆ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನೆಡೆದಾಗ ಗೆಲುವು ತಾನಾಗಿಯೇ ದೊರೆಯುತ್ತದೆ ಎಂದರು.

ಇಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆತ್ಮ ಸ್ಥೈರ್ಯದಿಂದ ಭಾಗವಹಿಸಿ ಇದು ವಲಯ ಮಟ್ಟದ ಕ್ರೀಡಾ ಕೂಟವಾಗಿದ್ದು ಉತ್ತಮವಾಗಿ ಆಡಿದಾಗ ತಾಲೂಕಾ, ಜಿಲ್ಲಾ, ಹಾಗೂ ರಾಜ್ಯ ಮಟ್ಟದವರೆಗೂ ಅವಕಾಶ ಪಡೆಯಲು ಮುಂದಾಗಿ, ಮುಂದಿನ ಓಲಂಪಿಕ್ ಕ್ರೀಡೆಗಳಲ್ಲಿ ಪಾಲ್ಗೋಳ್ಳುವ ಛಲದಿಂದ ಸಾಗಿರಿ ಎಂದು ತಿಳಿಸಿದರು.

ನಂತರದಲ್ಲಿ ಬನ್ನಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ವೀರಪ್ಪ ಗೊಂದಿ ಹಾಗೂ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷೆ ಸುಜಾತ ಡಂಬಳ, ಗುಂಡು ಎಸೆಯುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.

ಈ ವೇಳೆ ತಾಲೂಕಿನ ವಿವಿಧ 11 ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಪಾಲ್ಗೋಂಡಿದ್ದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಶರಣಪ್ಪಗೌಡ ವೀರಪ್ಪಗೌಡ್ರ,ಯಲಬುರ್ಗಾ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉದಯ ಕುಮಾರ ತಳವಾರ, ಕಾರ್ಯದರ್ಶಿ ಶೇಖರಪ್ಪ ಚಿಂಚಲಿ, ಶಿಕ್ಷಕ ಶ್ರೀಕಾಂತ ಮುರಗೋಡ, ಹನುಮೇಶ ಎಂ.ಬಿ ಹಾಗೂ ನಿರ್ಣಾಯಕ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

1 hour ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

2 hours ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

3 hours ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

3 hours ago