ಕಲ್ಯಾಣಸಿರಿ ವಿಶೇಷ

ಗುಡೇಕೋಟೆ: ಮಹಾಮಾತೆ ಮದರ್ ತೆರೇಸಾಜನ್ಮದಿನಾಚರಣೆ

Gudekote: Mother Teresa’s Birthday Celebration

ಗುಡೇಕೋಟೆ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷ ವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪವಾಗಿ ಇದ್ದರು ಸಂತ ಮದರ್ ತೆರೇಸಾ ರವರು ಎಂದು ಗುಡೇಕೋಟೆ ಮದರ್ ತೆರೆಸಾ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ರೆಸಿಡೆನ್ಸಿಯಲ್ ಕೋಚಿಂಗ್ ಸೆಂಟರ್ ಶಿಕ್ಷಕ ಹೆಚ್.ತಿಪ್ಪೇಸ್ವಾಮಿ ಹೇಳಿದರು.

ಅವರು ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಮದರ್ ತೆರೆಸಾ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ರೆಸಿಡೆನ್ಸಿಯಲ್ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡಿದ್ದ ಭುವಿಗೆ ಬಂದ ಮಹಾತಾಯಿ ಕೊಳಗೇರಿಯ ಸಂತ ಮದರ್ ತೆರೆಸಾ ಅವರ ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ಪ್ರೀತಿ ಹಾಗೂ ಸೇವೆಯ ಮೂಲಕ ಜಗತ್ತಿನಾದ್ಯಂತ ಕೋಟ್ಯಾಂತರ ಹೃದಯಗಳನ್ನು ಗೆದ್ದ ಜಗತ್ತಿನ ಮಹಾತಾಯಿ ಸಂತ ಮದರ್ ತೆರೇಸಾರವರ ಚಿಂತನೆ ಹಾಗೂ ಆದರ್ಶಗಳನ್ನು ಇಂದಿನ ಯುವಪೀಳಿಗೆಯ ಮಧ್ಯೆ ಕೊಂಡೊಯ್ಯವ ಸಲುವಾಗಿ ನಮ್ಮ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳ ಮೂಲಕ ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳನ್ನು ಗಳಿಸಿದೆ. ಮಾತ್ರವಲ್ಲದೆ ಮಾನವೀಯ ಹೃದಯಗಳನ್ನೊಳಗೊಂಡ ಜಾತ್ಯಾತೀತರ ಹಾಗೂ ಸೌಹಾರ್ದ ಕೂಟವಾಗಿ ಹೊರಹೊಮ್ಮಿದೆ ಹಾಗಾಗಿ ಮುದ್ದಿನ ವಿದ್ಯಾರ್ಥಿಗಳು ಸಂತ ಮದರ್ ತೆರೆಸಾ ಅವರ ಆದರ್ಶಗಳನ್ನು ತಮ್ಮ ಜೀವನಗಳಲ್ಲಿ ಅಳವಡಿಸಿಕೊಂಡು ಎಲ್ಲಾ ಧರ್ಮದವರನ್ನು ಒಂದೇ ಎಂದು ಭಾವಿಸಿ ಸಮ ಸಮಾಜವನ್ನು ಕಟ್ಟುವಂತವರು ನೀವಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮದರ್ ತೆರೆಸಾ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ರೆಸಿಡೆನ್ಸಿಯಲ್ ಕೋಚಿಂಗ್ ಸೆಂಟರ್ ಶಿಕ್ಷಕರಾದ ಜಯಲಕ್ಷ್ಮಿ, ಪರ್ವೀನ್, ಅನಿತಾ, ನಾಗರತ್ನಮ್ಮ, ಅರ್ಪಿತಾ, ಸುಮಾ, ಶರಣಮ್ಮ, ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

56 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago