Breaking News
ಯಲಬುರ್ಗಾ ನಂ1 ಸರಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಅಮಾನತು,

Yalaburga No. 1 Government Primary School Head Teacher Rudra Gowda Goni suspended.

ಶಿಕ್ಷಕ ಅಮಾನತ,,,,

ಕೊಪ್ಪಳ( ಯಲಬುರ್ಗಾ) : ಪಟ್ಟಣದ ನಂ.1 ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2 ಚೀಲ ಬೆಳೆ ಕಳ್ಳತನವಾಗಿರುವ ಕುರಿತು ವರದಿ ನೀಡದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಅವರನ್ನು ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ್ ಅಮಾನತು ಆದೇಶ ಹೊರಡಿಸಿದ್ದಾರೆ,,,

ಘಟನೆಯ ವಿವರ,,ಶಾಲೆಯಲ್ಲಿದ್ದ ಎರಡು ಚೀಲ ಬೆಳೆ ಕಳ್ಳತನವಾಗಿವೆ ಎಂದು ಆರೋಪಿಸಿದ ಮುಖ್ಯ ಶಿಕ್ಷಕ ಈ ಕುರಿತು ಪೋಲಿಸ್ ಇಲಾಖೆಗೆ ದೂರು ನೀಡಬೇಕಿತ್ತು,,? ಆದರೆ ದೂರನ್ನು ನೀಡದೇ ಇದ್ದರಿಂದ ಹಾಗೂ ಬೆಳೆ ಕಳ್ಳತನದ ಬಗ್ಗೆ ನನಗೇನೂ ಗೊತ್ತಿಲ್ಲಾ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಪತ್ರಕರ್ತ ಶಿವಮೂರ್ತಿ ಇಟಗಿಯವರು ಆರೋಪಿಸಿದ್ದಾರೆ.

ಈ ಮುಖ್ಯ ಶಿಕ್ಷಕ ರುದ್ರಗೌಡ ತೊಗರಿ ಬೆಳೆ ಕಳ್ಳತನದ ಬಗ್ಗೆ ಸೂಕ್ತ ಮಾಹಿತಿ ಒದಗಿಸದೇ ಇರುವದರಿಂದ ಇವರೇ ನೆರ ಹೊಣೆಗಾರರು ಎಂದು ಆರೋಪಿಸಿದರು.

ಘಟನೆ ಕುರಿತಂತೆ ಯಲಬುರ್ಗಾ ಅಕ್ಷರ ದಾಸೋಹ ಸಹಾಯ ನಿರ್ದೇಶಕರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಲಾಗಿ ಪೂರಕ ದಾಖಲೆಗಳು ನಮೂನೆ – 2 ಹಾಗೂ ವೋಚರ್ ಗಳನ್ನು ಪರಿಶೀಲಿಸಿದಾಗ ಮುಖ್ಯ ಶಿಕ್ಷಕನ ಬಂಡವಾಳ ಬಯಲಾಗಿದೆ.

ನಿಯಮಾನುಸಾರ ದೂರು ದಾಖಲಿಸದೇ ನಿರ್ಲಕ್ಷ ವಹಿಸಲಾಗಿದೆ ಎಂದು ಯಲಬುರ್ಗಾ ಕ್ಷೇತ್ರ ಶಿಕ್ಷಣಿಧಿಕಾರಿಗಳು ವರದಿ ನೀಡಿದ್ದಾರೆ.

ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಇತನು ಇಲಾಖೆ ನಿಯಮವನ್ನು ಉಲ್ಲಂಘಿಸಿ, ಕರ್ತವ್ಯ ಲೋಪ ತೋರಿದ್ದರಿಂದ ಇತನನ್ನು ಅಮಾತುಗೊಳಿಸುವಂತೆ ಕೊಪ್ಪಳ ಡಿಡಿಪಿಐ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದು, ಸಕ್ಷಮ ಪ್ರಾಧಿಕಾರ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡದಂತೆ ಸೂಚಿಸಿದ್ದಾರೆ.
ವರದಿ : ಪಂಚಯ್ಯಹಿರೇಮಠ,,

ಬೀದಿಬದಿವ್ಯಾಪಾರಸ್ಥರು ಪಿಎಂ ಯೋಜನೆ ಸದುಪಯೋಗ ಪಡೆದುಕೊಳ್ಳಿ:ಕಾಳೇಶ

Street traders take advantage of PM scheme: Kalesh


ವರದಿ : ಪಂಚಯ್ಯ ಹಿರೇಮಠ,,,
ಕೊಪ್ಪಳ : ಬೀದಿ ಬದಿ ವ್ಯಾಪಾರಸ್ಥರಿಗೆ ದೀನ ದಯಾಳು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು ಪ್ರತಿಯೋಬ್ಬ ವ್ಯಾಪಾರಸ್ಥರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ವ್ಯಾಪಾರ, ಉದ್ಯೋಗಗಳನ್ನು ಉನ್ನತಿಕರಿಸಲು ಮುಂದಾಗಬೇಕು ಎಂದು ಜಿಲ್ಲಾ ಕೌಶಲ್ಯಭಿವೃದ್ದಿ ಅಭಿಯಾನ ವ್ಯವಸ್ಥಾಪಕ ಅಹ್ಮದ್ ಹುಸೇನ್ ಹೇಳಿದರು.
ಗುರುವಾರದಂದು ಪಟ್ಟಣ ಪಂಚಾಯತಿಯಲ್ಲಿ ಜಿಲ್ಲಾಳಿತ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.
ವ್ಯಾಪಾರಸ್ಥರಿಗೆ ಸ್ವನಿಧಿಯಿಂದ ವಿವಿಧ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಬಿ ಓ ಸಿ ಡಬ್ಲ್ಯೂ, ಪ್ರಧಾನ ಮಂತ್ರಿ ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳನ್ನು ವ್ಯಾಪಾರಸ್ಥರ ಕಲ್ಯಾಣಕ್ಕೆ ನೀಡುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಬ್ಯಾಂಕ್ ಖಾತೆ, ಆಧಾರ, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್ ವಿವಿಧ ಉದ್ಯೋಗಕ್ಕೆ ಸಂಬಂಧಿಸಿದ ದಾಖಲಾತಿ ನೀಡಿ ಮೊದಲ ಕಂತು 10ಸಾವಿರ, ಎರಡನೇ ಕಂತು 20 ಸಾವಿರ, ಮೂರನೇ ಕಂತು 50ಸಾವಿರ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯತಿಯನ್ನು ಸಂಪರ್ಕಿಸಿ ಎಂದು ತಿಳಿಸಿದರು.
ನಂತರದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಮಾತನಾಡಿ ಬೀದಿ ಬದಿ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟನ್ನು ಉನ್ನತಿಕರಿಸಲು ಪಿಎಂ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದು ಉದ್ಯೋಗಗಳನ್ನು ಉನ್ನತಿಕರಿಸಿಕೊಳ್ಳುವ ಮೂಲಕ ಸ್ವನಿಧಿ ಸಮೃದ್ದಿ ಶಿಬಿರದಿಂದ ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಲಲಿತಮ್ಮ ಯಡಿಯಾಪೂರ, ಉಪಾಧ್ಯಕ್ಷ ಪ್ರಶಾಂತ ಆರುಬೆರಳಿನ, ಪಟ್ಟಣ ಪಂಚಾಯತಿ ಸದಸ್ಯಾರದ ಗಗನ ನೋಟಗಾರ, ಶಿವರಾಜ ಯಲ್ಲಪ್ಪಗೌಡ್ರ, ಮುಖ್ಯಾಧಿಕಾರಿ ರವಿಂದ್ರ ಬಾಗಲಕೋಟ, ಸಮುದಾಯ ಸಂಘಟನಾಧಿಕಾರಿ ಶಿವಕುಮಾರ ಕಟ್ಟಿಮನಿ ಹಾಗೂ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಕಲ್ಲಪ್ಪ ಮರಡಿ ಸೇರಿದಂತೆ ನೂರಾರು ವ್ಯಾಪಾರಸ್ಥರು ಹಾಜರಿದ್ದರು.
ವರದಿ : ಪಂಚಯ್ಯ ಹಿರೇಮಠ,,,