Breaking News

ಬೆಂಗಳೂರಿನಲ್ಲಿ ಶನಿವಾರ “ಶೈಕ್ಷಣಿಕ ಗ್ರಂಥಾಲಯದ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ” ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

International Symposium on “Impact of Artificial Intelligence on Academic Libraries” in Bangalore on Saturday

ಜಾಹೀರಾತು


ಬೆಂಗಳೂರು, ಆ, 30; ಭಾರತೀಯ ಗ್ರಾಂಥಾಲಯಗಳ ಸಂಘ ಹಾಗೂ ಶ್ರೀಲಂಕಾ ಗ್ರಂಥಾಲಯಗಳ ಸಂಘದ ಸಹಯೋಗದಲ್ಲಿ “ಶೈಕ್ಷಣಿಕ ಗ್ರಂಥಾಲಯದ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ” ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಶನಿವಾರ ಶೆಷಾದ್ರಿಪುರಂ ಕಾಲೇಜಿನಲ್ಲಿ ನಡೆಯಲಿದೆ.
ಶೇಷಾದ್ರಿಪುರಂ ಸಂಜೆ ಕಾಲೇಜು ಸಭಾಂಗಣದದಲ್ಲಿ ಬೆಳಿಗ್ಗೆ 10 ಗಂಟೆಗೆ ತಜ್ಞರು ಕೃತಕ ಬುದ್ದಿಮತ್ತೆಯಿಂದ ಶೈಕ್ಷಣಿಕ ಗ್ರಂಥಾಲಯದ ಮೇಲೆ ಆಗುತ್ತಿರುವ ಗಂಭೀರ ಪರಿಣಾಮಗಳ ಕುರಿತಂತೆ ಬೆಳಕು ಚೆಲ್ಲಲಿದ್ದಾರೆ.
ಈ ವಿಚಾರ ಸಂಕಿರಣದಲ್ಲಿ ಶ್ರೀಲಂಕಾದ ಕೊಲಂಬೋ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ವಿಭಾಗದ ಮುಖ್ಯಸ್ಥರಾದ ಡಾ. ರುವಾನಾ ಸಿ.ಜಿ ಗಮಗೆ ಹಾಗೂ ಭಾರತ ದೇಶದ ವಿವಿಧ ವಿಶ್ವವಿದ್ಯಾನಿಲಯಗಳ ವಿಷಯ ತಜ್ಞರು ಭಾಗವಹಿಸುತ್ತಿದ್ದಾರೆ.
ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ ಕೃಷ್ಣ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಧರ್ಮದರ್ಶಿ ಡಬ್ಲ್ಯೂ ಡಿ ಅಶೋಕ್. ದ್ರಾವಿಡ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ದೊರೆಸ್ವಾಮಿ, ರಾಜ್ಯದ ವಿವಿಗಳ ಗ್ರಂಥಾಲಯ ಮುಖ್ಯಸ್ಥರು ಹಾಗೂ ಆಧ್ಯಾಪಕರುಗಳು ಭಾಗವಹಿಸಲಿದ್ದಾರೆ.

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *