ಕಲ್ಯಾಣಸಿರಿ ವಿಶೇಷ

ಶ್ರೀ ಕೊಲ್ಲಿ ನಾಗೇಶ್ವರರಾವ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ರಂಗಮAದಿರ ನಿರ್ಮಾಣ: ಭೂದಾನಿಗಳ ಆಕ್ಷೇಪ

Construction of theater in front of Sri Kolli Nageswara Rao Gangaiah Government First Class College: Land Donors Objection


ಗಂಗಾವತಿ: ಇಲ್ಲಿಯ ಆನೆಗೊಂದಿ ರಸ್ತೆ ಮಾರ್ಗದಲ್ಲಿರುವ ಶ್ರೀ ಕೊಲ್ಲಿ ನಾಗೇಶ್ವರರಾವ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಂದಿಕೊAಡು ಮುಂಭಾಗದಲ್ಲಿ ರಂಗಮAದಿರ ನಿರ್ಮಾಣವಾಗುತ್ತಿರುವದಕ್ಕೆ ಭೂ ದಾನಿಗಳು ಹಾಗೂ ಅಂತರಾಷ್ಟಿçÃಯ ಮಾನವ ಹಕ್ಕುಗಳ ಕರ್ನಾಟಕ ರಾಜ್ಯ ಆಯೋಗದ ರಾಜ್ಯಾದ್ಯಕ್ಷರಾಗಿರುವ ಡಾ. ಕೊಲ್ಲಿ ನಾಗೇಶ್ವರರಾವ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಕಳೆದ ೩೦ ವರ್ಷಗಳ ಹಿಂದೆ ಕಾಲೇಜು ಕಟ್ಟಡಕ್ಕಾಗಿ ಸುಮಾರು ೧೫೦ ಕೋಟಿ ರೂಪಾಯಿ ಬೆಲೆಬಾಳುವ ಸರ್ವೆ ನಂ. ೪೪/೪ ಪ್ರದೇಶದಲ್ಲಿ ೩ ಎಕರೆ ೨೮ ಗುಂಟೆ ಭೂಮಿಯನ್ನು ರಾಜ್ಯಪಾಲರ ಹೆಸರಿನಲ್ಲಿ ನೊಂದಾಯಿಸಿ ನೀಡಲಾಗಿತ್ತು. ಈಗ ಆ ಕಾಲೇಜು ಮುಂಭಾಗದಲ್ಲಿ ರಂಗಮAದಿರ ನಿರ್ಮಾಣ ಮಾಡುತ್ತಿದ್ದರಿಂದ ಶಾಲಾ ಕೋಠಡಿಯಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಬೆಳಕು, ಗಾಳಿ ಇಲ್ಲದೇ ತೊಂದರೆಯಾಗುತ್ತಿದೆ. ಈಗಾಗಲೇ ಕಾಲೇಜು ಆವರಣದಲ್ಲಿ ಎರಡು ಆಡಿಟೋರಿಯಂ ಹಾಲ್‌ಗಳಿದ್ದು, ಇದನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಗಾಲಿ ಜನಾರ್ದನರೆಡ್ಡಿ ಅವರು ಉಪಸ್ಥಿತರಿದ್ದರು. ಈಗ ರಂಗಮAದಿರ ನಿರ್ಮಾಣವಾಗುತ್ತಿದ್ದರಿಂದ ಕಟ್ಟಡದ ಮುಂಭಾಗದ ಕಳೆ ಬಾರದಂತಾಗುತ್ತಿದೆ. ಪ್ರಸ್ತುತ ಕಟ್ಟಡ ನಿರ್ಮಾಣವಾಗುವುದರ ಬಗ್ಗೆ ಸ್ಥಳೀಯ ಶಾಸಕರ ನಿವಾಸದಲ್ಲಿ ಜುಲೈ-೭ ರಂದು ಭೇಟಿಯಾಗಿ ಲಿಖಿತವಾಗಿ ಪತ್ರ ಬರೆದು ತಡೆಹಿಡಿಯುವಂತೆ ಕೋರಲಾಗಿತ್ತು. ಅಲ್ಲದೇ ಕಾಲೇಜಿನ ಪ್ರಾಚಾರ್ಯ ಜಾಜಿ ದೇವೇಂದ್ರಪ್ಪ ಅವರಿಗೆ ಹಲವಾರು ಬಾರಿ ಮಾಹಿತಿ ನೀಡಲಾಗಿತ್ತು. ಕೂಡಲೇ ಶಾಸಕರು ಕಾಲೇಜಿನ ಪ್ರಾಚರ್ಯರಿಗೆ ದೂರವಾಣಿ ಮೂಲಕ ಕರೆಮಾಡಿ ರಂಗಮAದಿರ ಕಟ್ಟಡ ನಿರ್ಮಿಸಬಾರದು, ಕೇವಲ ಬಯಲು ರಂಗಮAದಿರ ನಿರ್ಮಿಸುವಂತೆ ಸೂಚಿಸಲಾಗಿತ್ತು. ಆದರೆ ಈಗ ಎರಡನೇ ಬಾರಿ ಶಾಸಕರ ಗಮನಕ್ಕೆ ತಂದಾಗ ಕಾಮಗಾರಿ ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಸೆಪ್ಟೆಂಬರ್-೮ ರಂದು ಕಟ್ಟಡದ ಆರ್‌ಸಿಸಿ ಹಾಕುವಾಗ ಭೂಮಾಲಿಕರು ಆಕ್ಷೇಪ ವ್ಯಕ್ತಪಡಿಸಿ ಶಾಸಕರು ಬರುವ ತನಕ ಕಾಮಗಾರಿ ಕೈಗೊಳ್ಳಬಾರದೆಂದು ಒತ್ತಾಯಿಸಿದರು. ಮತ್ತೇ ಗುತ್ತಿಗೆದಾರರು ಭೂಮಾಲೀಕರ ಮಾತು ಕೇಳದೆ ಪೊಲೀಸರನ್ನು ಕರೆಯಿಸಿ ಆರ್‌ಸಿಸಿ ಪ್ರಾರಂಭಿಸಿ ದೌರ್ಜನ್ಯ ಮಾಡಿದ್ದಾರೆಂದು ಅರೋಪಿಸಿದ್ದಾರೆ. ಕೂಡಲೆ ಈ ಕಟ್ಟಡದ ಕಾಮಗಾರಿ ನಿಲ್ಲಿಸದಿದ್ದರೆ ಕಾಲೇಜು ಆವರಣದಲ್ಲಿ ಭೂದಾನಿಗಳಾಗಿರುವ ಕೊಲ್ಲಿ ನಾಗೇಶ್ವರರಾವ ಕುಟಂಬದವರು ಕಾಲೇಜಿನ ಪ್ರಾಚರ್ಯರರು, ಮತ್ತು ಗುತ್ತಿಗೆದಾರನ ವಿರುದ್ಧ ಧರಣಿ ನಡೆಸಲಾಗುವದೆಂದು ಕೊಲ್ಲಿ ನಾಗೇಶ್ವರರಾವ ಎಚ್ಚರಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago