Breaking News

ಗಣೇಶ ಹೋದ ಜೋಕುಮಾರ ಬಂದ

Ganesha went Jokumar came

ಜಾಹೀರಾತು

ಗಂಗಾವತಿ,10: ನಗರದಿಂದ ಗಣೇಶ ಹೋದ  ಹುಟ್ಟುವ ನಂತರ ಜೋಕುಮಾರ ಸ್ವಾಮಿ ಮಳೆ ಮಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಗಣೇಶ ಸವಿಸವಿಯಾದ ಭೋಜನ ಸವಿದು ಹೋದರೆ ಜೋಕಮಾರಸ್ವಾಮಿಗೆ ನುಚ್ಚು ಪುಂಡಿಪಲ್ಯ ಕಟಕು ರೊಟ್ಟಿ. ಮೆಣಸಿನಕಾಯಿ ಉಪ್ಪು ಇವೇ ನೈವೇದ್ಯ ಮನೆ ಮನೆಗೆ ಸುತ್ತಿ ಜನರು ಪಡುವ ಕಷ್ಟಗಳನ್ನು ನೋಡಿ ಅವುಗಳನ್ನು ಶಿವನಿಗೆ ತಿಳುಸುತ್ತಾನೆ ಜೋಕುಮಾರ ಸ್ವಾಮಿ ಹೋದ ನಂತರ ಮಳೆಯಾಗುತ್ತದೆ ಎಂಬುದು ಜನರ ನಂಬಿಕೆ.

ಜೋಕುಮಾರನ್ನು ಬೇವಿನತಪ್ಪಲ ತುಂಬಿದ ಬುಟ್ಟಿಯಲ್ಲಿಟ್ಟುಕೊಂಡು ಮನೆ ಮನೆಗೆ ತೆರಳಿ ಜೋಕುಮಾರ ಬಂದಾಗ ಜೋಕಾಮಾರಾ ಎಂದು ಜೋಕಮಾರ ಗುಣಗಾನದ ಹಾಡು ಹಾಡುವ ಮಹಿಳೆಯರು. ಜನರಿಂದ ನೈವೇದ್ಯ ಪಡೆದು.ಬೇವಿನ ಎಲೆಯಲ್ಲಿ ಕಾಡಿಗೆ(ಕಪ್ಪು)ನೀಡುತ್ತಾರೆ ಅದನ್ನು ಜಮೀನನಲ್ಲಿ ಹೊಳಿದರೆ ಉತ್ತಮ ಫಸಲು ನೀಡುತ್ತದೆ. ಮಕ್ಕಳು ಹಣೆಗೆ ಹಚ್ಚಿದರೆ

ಕೆಟ್ಟ ದೃಷ್ಟಿ ಬೀಳುವುದಿಲ್ಲ ಎಂಬುದು ನಂಬಿಕೆ ಹೀಗೆ ಏಳುದಿನಗಳವರೆಗೆ ಊರು ಸುತ್ತುವ ಜೋಕುಮಾರ ಕುರಿತು ಜನಪದದಲ್ಲಿ ಅನೇಕ ಕಥೆಗಳು ಹಾಸುಹೊಕ್ಕಾಗಿವೆ ಹುಣ್ಣೆಮೆ ಹಿಂದಿನ ರಾತ್ರಿ ಜೋಕುಮಾರನ ತಲೆ ಒಡೆದು ಹಳ್ಳಿದಲ್ಲಿ ಇಡುವ ಪದ್ಧತಿ ಇದೆ ಜೋಕುಮಾರ ಸ್ವಾಮಿಯ ಆಚರಣೆ ಗಂಗಾವತಿ ನಗರದ ಹಿರೇಜಂತಕಲ್ ಹಾಗೂ ನಗರ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಈಗಲೂ ಆಚರಣೆ ಮುಂದುವರೆಯಿಸಿಕೊಂಡು ಬರಲಾಗಿದೆ ಎಂದು ನಿಂಗಮ್ಮಹೇಳಿದರು  ಈ ಸಂದರ್ಭದಲ್ಲಿ, ಅಂಗನವಾಡಿ ಶಿಕ್ಷಕಿ ಶರಣಮ್ಮ‌ಕಲ್ಮಠ, ಸಾವಿತ್ರಿ,ಯಮನಮ್ಮ,ಜ್ಯೋತಿ, ಲಿಂಗಮ್ಮ,ಮಹಾದೇವಿ,ಗಂಗಂಗಾಮ್ಮ,  ಸೇರಿದಂತೆ ಇತರರು ಇದ್ದರು

About Mallikarjun

Check Also

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

Karunyashram rescued a two-month-old orphan and handed it over to the department as per rules. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.