ಕಲ್ಯಾಣಸಿರಿ ವಿಶೇಷ

ಶಾಲೆ ಸಾಮಾಜಿಕ ಪರಿವರ್ತನೆಯ ಕೇಂದ್ರ ಆಗಬೇಕು: ಪೂಜ್ಯ ಶ್ರೀ ಸದಾಶಿವ ಸ್ವಾಮೀಜಿ.

School should become a center of social transformation: Pujya Sri Sadashiva Swamiji.

ಚಿಟಗುಪ್ಪ : ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕಾಗಿ ಹಮ್ಮಿಕೊಂಡ ಕಾರ್ಯಕ್ರಮವೇ ಭಾರತೀಯ ಸಂಸ್ಕೃತಿ ಉತ್ಸವ ಎಂದು ಸೇಡಂ ಪರಮ ಪೂಜ್ಯ ಸದಾಶಿವ ಸ್ವಾಮೀಜಿಗಳು ನುಡಿದರು.

ತಾಲೂಕಿನ ಕಂದಗೋಳ ಗ್ರಾಮದ ಚನ್ನಬಸವ ಪಟ್ಟದ್ದೇವರು ಗುರುಕುಲ ಆವರಣದಲ್ಲಿ ತಾಲೂಕು ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ವಿಕಾಸ ಪಥ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯದಲ್ಲಿ ವಹಿಸಿ ಮಾತನಾಡಿದ ಅವರು  ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯು ಶಾಲೆ ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಬೇಕು ಎಂಬ ಉದಾತ್ತ ಸಂಕಲ್ಪದೊಂದಿಗೆ ಕಳೆದ ಐವತ್ತು ವರ್ಷಗಳಿಂದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ಕೈಗೊಳ್ಳುವುದರ ಜೊತೆಗೆ ಕಲ್ಯಾಣ ಕರ್ನಾಟಕ ನಾಡಿನಾದ್ಯಂತ ಸಮಾಜ ಸೇವಾ ಕೈಂಕರ್ಯಗಳನ್ನು ಸಹೃದಯ ಜನತೆಗೆ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿದೆ.  

ಸಂಸ್ಥೆಯ 51 ನೇ ವರ್ಷದಲ್ಲಿ ಪಾದಾರ್ಪಣೆಗೊಂಡು ಸುವರ್ಣ ಮಹೋತ್ಸವದೆಡೆಗೆ ಸಾಗುತ್ತಿದೆ.  ನಿಮಿತ್ತ 7ನೇ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಬೃಹತ್ ಐತಿಹಾಸಿಕ ಕಾರ್ಯಕ್ರಮವು ಸೇಡಮ್ ತಾಲೂಕಿನ ಪ್ರಕೃತಿ ನಗರದಲ್ಲಿ ಜನವರಿ 29,2025 ರಿಂದ ಫೆಬ್ರವರಿ 06,2025 ವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸರ್ವರೂ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. 

ಜಿಲ್ಲಾ ವಿಕಾಸ ಅಕಾಡೆಮಿ ಸಂಚಾಲಕರಾದ ರೇವಣ್ಣಸಿದ್ದಪ್ಪ ಜಲಾದೆ ಮಾತನಾಡಿ ಒಂಭತ್ತು ದಿನಗಳ ಕಾಲ ನಡೆಯುವ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಜಿಲ್ಲೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 

ಇದರ ಉಪಯೋಗವನ್ನು ಪಡೆದುಕೊಂಡು ಈ ಭಾಗದ ವಿಕಾಸಕ್ಕಾಗಿ ಎಲ್ಲರೂ ದುಡಿಯಲು ಮುಂದಾಗಬೇಕೆಂದು ತಿಳಿಸಿದರು.

ತಾಲೂಕು ವಿಕಾಸ ಅಕಾಡೆಮಿ ಸಂಚಾಲಕರಾದ ಸಂಗಮೇಶ ಎನ್ ಜವಾದಿ ಮಾತನಾಡಿ ಯುವ ಶಕ್ತಿ, ಶಿಕ್ಷಣ,ಪರಿಸರ, ಕೃಷಿ, ದೇಶಭಕ್ತಿ, ಸ್ವಾಭಿಮಾನ ಇತ್ಯಾದಿ ವಿಷಯಗಳ ಮೇಲೆ ಚಿಂತನಾ ಸಮಾವೇಶಗಳು ನಡೆಯುತ್ತವೆ. ನಮ್ಮ ತಾಲೂಕಿನಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾವೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಚಿಟಗುಪ್ಪ ವೃತ್ತ ನಿರೀಕ್ಷಕರಾದ ಶ್ರೀನಿವಾಸ ಅಲ್ಲಾಪೂರೆ ಮಾತನಾಡಿ ಪೂಜ್ಯ ಶ್ರೀ ಸದಾಶಿವ ಸ್ವಾಮೀಜಿಗಳು ಕಲ್ಯಾಣ ಕರ್ನಾಟಕದ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಕೇಂದ್ರಗಳಿಗೆ ಸುಮಾರು 5000 ಕಿಲೋ ಮೀಟರ್ ಪ್ರವಾಸ ಕೈಗೊಂಡ ಶ್ರೀಗಳ ಸೇವಾ ಕಾರ್ಯ ಮೆಚ್ಚುವಂಥದ್ದು. ಶ್ರೀಗಳ  ಸಾಮಾಜಿಕ ಮತ್ತು ಶೈಕ್ಷಣಿಕ ಕಳಕಳಿಗೆ ಸರ್ವರೂ ತಲೆ ಭಾಗಬೇಕು ಎಂದರು.

ಗಣ್ಯರಾದ ಬಂಡೆಪ್ಪಾ ಮೂಲೆಗೆ ಮಾತನಾಡಿ ಚನ್ನಬಸವ ಪಟ್ಟದ್ದೇವರು ಮಾಡಿದ ಶೈಕ್ಷಣಿಕ ಸೇವೆಯನ್ನು ಸ್ಮರಣೆ ಮಾಡಿಕೊಂಡು ಅದೇ ದಾರಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ ಎಂದರು.

ಶಸಪಾ ಸದಸ್ಯ ಚಂದ್ರಶೇಖರ ತಂಗಾ ಮಾತನಾಡಿ ಸಮಾಜಕ್ಕೆ ಉತ್ತಮ ಸಂದೇಶದೊಂದಿಗೆ ಐತಿಹಾಸಿಕವಾದ ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇದಾಗಲಿದೆ.ನಾವೆಲ್ಲರೂ ಕೈಜೋಡಿಸಿ, ಈ ಸಮಾವೇಶ ಯಶಸ್ವಿಗೊಳಿಸೋಣವೆಂದು ಹೇಳಿದರು.

ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಮಾಣಿಕರಾವ ಹೌಶಟ್ಟಿ ವಹಿಸಿದ್ದರು. ರೇಖಾ ಮಂಜುನಾಥ ನಿರೂಪಿಸಿ, ವಂದಿಸಿದರು.ಮಹಾದೇವ ಶಟಗಾರ ಸ್ವಾಗತಿಸಿದರು.ಗ್ರಾಮದ ಮುಖಂಡರಾದ ಜಗನ್ನಾಥ್ ದೇವಣಿ, ಅನಿಲ್ ಕುಮಾರ ಸಿಂಧಗೆರೆ, ಬಂಡೆಪ್ಪ ಶೇರಿ, ರಾಜಕುಮಾರ್ ದೇವಣಿ, ಅಕ್ಕಮಹಾದೇವಿ ಕಲಾ ಬಳಗ ಕಂದಗೂಳ ಸೇರಿದಂತೆ ಶಿಕ್ಷಕರು, ಶಿಕ್ಷಕಿಯರು, ಗಣ್ಯರು, ಯುವಕರು, ಮಕ್ಕಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago