ಕಲ್ಯಾಣಸಿರಿ ವಿಶೇಷ

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರö್ಯವಂತ ಎಂಬ ಪುಸ್ತಕ ಬಿಡುಗಡೆ

Release of book titled Prophet Muhammad (PBUH) Great Character by Jama Ate Islami Hind

ಮಾನ್ವಿ: ಪಟ್ಟಣದ ಶಾಸಕರ ಭವನದಲ್ಲಿ ಜಮಾ ಅತೆ ಇಸ್ಲಾಮಿ ಹಿಂದ್ ಮಾನವಿ ತಾ.ಘಟಕದಿಂದ ಸೀರತ್ ಅಭಿಯಾನ ಅಂಗವಾಗಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನಿಕಟಪೂರ್ವ ಕ.ಸಾ.ಪ.ಜಿಲ್ಲಾಧ್ಯಕ್ಷರಾದ ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು ವಿವಿಧ ಲೇಕಕರು ಬರೆದ ಶಾಂತಿ ಪ್ರಕಾಶನದಿಂದ ಪ್ರಕಟಿತ ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರö್ಯವಂತ ಎಂಬ ಲೇಖನಗಳ ಸಂಕಲನದ ಪುಸ್ತಕವನ್ನು ಬಿಡುಗಡೆ ಗೊಳಿಸಿ ಮಾತನಾಡಿ 6ನೇ ಶತಮಾನದಲ್ಲಿ ಪ್ರವಾದಿ ಮುಹಮ್ಮದ್ (ಸ)ರವರು ಮರುಭೂಮಿ ಪ್ರದೇಶದಲ್ಲಿ ಜನರ ಜೀವನವನ್ನು ಉದ್ದರಿಸುವುದಕ್ಕಾಗಿ ದೇವರಿಂದ ಅದೇಶವನ್ನು ಪಡೆದು ಅತ್ಯಂತ ಸರಳವಾದ ಜೀವನವನ್ನು ನಡೆಸಿ ಅಂದಿನ ದಿನಗಳಲ್ಲಿ ನಡೆಯುತ್ತಿದ ಶೋಷಣೆ,ದಬ್ಬಳಿಕೆಯನ್ನು ತಡೆದು ಜನರಿಗೆ ಉತ್ತಮವಾದ ಮಾರ್ಗವನ್ನು ನೀಡಿದರು ಹಾಗೂ ಮುಸ್ಲಿಂರಿಗೆ ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿ ಪವಿತ್ರವಾದ ಕುರಾನ್ ಗ್ರಂಥವನ್ನು ನೀಡಿದ್ದರೆ. ಜಗತ್ತಿನ ಮಹಾನಿಯರಲ್ಲಿ ,ದರ್ಶನಿಕರಲ್ಲಿ ಪ್ರವಾದಿ ಮುಹಮ್ಮದ್ (ಸ) ಪ್ರಮುಖರಾದವರು ಕುರನ್ ಗ್ರಂಥವನ್ನು ಕೇವಲ ಮುಸ್ಲಿಂ ರೊಂದೆ ಅಲ್ಲ ಎಲ್ಲಾ ಸಮುದಾಯದವರು ಕೂಡ ಓದುವ ಹಾಗೂ ಆಚರಿಸಲು ಯೋಗ್ಯವಾಗಿರುವ ಗ್ರಂಥವಾಗಿದ್ದು ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರö್ಯವಂತ ಎಂಬ ಪುಸ್ತಕವು ಪ್ರವಾದಿ ಮುಹಮ್ಮದ್ (ಸ)ರವರ ಜೀವನದ ಹೆಚ್ಚಿನ ಅಂಶಗಳನ್ನು ತಿಳಿಯುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರö್ಯವಂತ ಎಂಬ ಪುಸ್ತಕದ ಕುರಿತು ಡಾ.ಬಸವರಾಜ ಸುಂಕೇಶ್ವರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಅಕ್ಕಮ್ಮ , ಪುರಸಭೆ ಸದಸ್ಯರಾದ ಶೇಖ್ ಫಾರೀದ್ ಉಮ್ರಿ, ತಾ.ಅಧ್ಯಕ್ಷರಾದ ಅಬ್ದುಲ್ ರೆಹಮಾನ್ , ಸೀರತ್ ಅಭಿಯಾನದ ಸಂಚಾಲಕರಾದ ಉಮರ್ ದೇವರ ಮನೆ, ಹಿರಿಯ ನ್ಯಾಯಾವಾದಿಗಳಾದ ಗುಮ್ಮ ಬಸವರಾಜ, ಶಿವರಾಜನಾಯಕ, ಡಾ.ರೋಹಿಣಿ ಮಾನ್ವಿಕರ್, ಜಮಾ ಅತೆ ಇಸ್ಲಾಮಿ ಹಿಂದ್ ಸದಸ್ಯರಾದ ಕುತ್ತಿಜಾ ಪರ್ವಿನ್ ,ಸಬ್ಜಲಿಸಾಬ್, ಅಕ್ಬರ್ ಸಾಬ್, ಮಾಜಿ ಅಧ್ಯಕ್ಷರಾದ ಮುಹಮ್ಮದ್ ದಾವುದ್ ಸಿದ್ದಿಖಿ, ಮತ್ತು ಶೇಖ್ ಬಾಬಾ ಹುಸೇನ್ ಸಾಬ್, ಅಬ್ದುಲ್ ರೌಪ್ ಸಾಬ್ ಸೇರಿದಂತೆ ಇನ್ನಿತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago