Breaking News

ಸೆ.22 ರಂದು ತುಂಗಭದ್ರೆಗೆ ಬಾಗಿನ

Bagina to Tungabhadra on 22nd September

ಜಾಹೀರಾತು
Screenshot 2024 09 18 07 57 33 55 680d03679600f7af0b4c700c6b270fe7

ಕಲಬುರಗಿ (ಕರ್ನಾಟಕ ವಾರ್ತೆ) : ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಹೇಳಿದರು

ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ,ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ-ಕೊಪ್ಪಳ ಮಧ್ಯೆ ಇರುವ ಜಲಾಶಯದ 19 ನೇ ಕ್ರೆಸ್ಟಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು,ರೈತರು ಆತಂಕಗೊಂಡಿದ್ದರು, ಸರ್ಕಾರ,ಸ್ಥಳೀಯ ಜನಪ್ರತಿನಿಧಿಗಳು ,ಇಂಜಿನಿಯರುಗಳು ತೋರಿದ ಕಾಳಜಿ ಹಾಗೂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವ ನೂರಾರು ಕಾರ್ಮಿಕರ ತಂಡ ಶ್ರಮವಹಿಸಿ ಕೇವಲ ಐದು ದಿನಗಳಲ್ಲಿ ಗೇಟು ಅಳವಡಿಸಿ ನೀರು ಪೋಲಾಗುವುದನ್ನು ನಿಯಂತ್ರಿಸಿದರು.ಪರಿಣಾಮವಾಗಿ ಈಗ ಜಲಾಶಯ ಪುನಃ ಭರ್ತಿಯಾಗಿದೆ.

ಕ್ರೆಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಇಂಜನಿಯರು ಹಾಗೂ ಕಾರ್ಮಿಕರು ಸೇರಿ ಸುಮಾರು 108 ಜನರಿಗೆ ಅಂದು ಸತ್ಕರಿಸಿ,ಗೌರವಿಸಲಾಗುವುದು ಎಂದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.