Breaking News

ಶಿಕ್ಷಕರ ಸಮಸ್ಯೆ ಬಗೆಹರಿಸಲುಯಾವುದೇ ಹೋರಾಟಕ್ಕೆ ಸಿದ್ಧ : ಪುಟ್ಟಣ್ಣ

Ready for any struggle to solve the problem of teachers: Puttanna

ಜಾಹೀರಾತು
ಜಾಹೀರಾತು


ಬೆಂಗಳೂರು, ಸೆ, 19;ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ರೀತಿ ಹೋರಾಟಕ್ಕೆ ಸಿದ್ಧ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದ್ದಾರೆ.
ವಿವಿ ಪುರಂನ ಶ್ರೀ ವಾಸವಿ ಕನ್ವೆನ್ಸನ್ ಸೆಂಟರ್ ನಲ್ಲಿ ಬೆಂಗಳೂರು ದಕ್ಷಿಣ ವಲಯ 1 ಹಾಗೂ 2 ರ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ  ಆಯೋಜಿಸಲಾದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರ ಹಲವು ಬೇಡಿಕೆಗಳು ದೀರ್ಘಕಾಲದಿಂದ ಈಡೇರಿಲ್ಲ. ಈ ಸಂಬಂಧ ಸರ್ಕಾರದ ಜೊತೆ ಸಂಧಾನ ಮಾತುಕತೆ ನಡೆಸುತ್ತೇನೆ. ಸಾಧ್ಯವಾಗದಿದ್ದರೆ ಹೋರಾಟ ಮಾಡುತ್ತೇನೆ, ಹೋರಾಟ ತಮಗೆ ಹೊಸದಲ್ಲ. ವಿದ್ಯಾರ್ಥಿ ಹಂತದಿಂದಲೇ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ ಎಂದರು.


ಅದಮ್ಯ ಚೇತನ ಪ್ರತಿಷ್ಠಾನದ ಅಧ್ಯಕ್ಷರಾದ  ತೇಜಸ್ವಿನಿ ಅನಂತಕುಮಾರ್‌ ಮಾತನಾಡಿ, ತಾವು ಅನ್ನದಾಸೋಹದ ಮೂಲಕ ಶಾಲೆಗಳ ಜೊತೆ ನಿಕಟ ಬಾಂಧವ್ಯ ಹೊಂದಿದ್ದು, ಶಿಕ್ಷಕರು ವಿದ್ಯಾರ್ಥಿಗಳ ನಿಜವಾದ ಮಾರ್ಗದರ್ಶಕರು ಎಂದರು.
 ಕ್ಯಾಮ್ಸ್ ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಕ್ರೇಡೋ ಅರ್ಲಿ ಚೈಲ್ಡ್ ಹುಡ್ ಸಲ್ಯುಷನ್ಸ್ ಸಹ ಸಂಸ್ಥಾಪಕರಾದ ಮೃದುಲ ಶ್ರೀಧ‌ರ್, ಒಕ್ಕಲಿಗ ಸಂಘದ ನಿರ್ದೇಶಕ ವೆಂಕಟರಾಮೇಗೌಡ, ಕ್ಯಾಮ್ಸ್ ಕರ್ನಾಟಕ ದಕ್ಷಿಣ ವಲಯ   1 ಮತ್ತು 2  ಅಧ್ಯಕ್ಷರಾದ ಜಯಪ್ರಕಾಶ್, ಗಿನ್ನಿಸ್ ವಿಶ್ವ ದಾಖಲೆದಾರರು, ಬಸವೇಶ್ವರ ಶಾಲೆಯ ಮುಖ್ಯಸ್ಥೆ ರಂಗಲಕ್ಷ್ಮಿ ಶ್ರೀನಿವಾಸ ಮತ್ತಿತರರು ಪಾಲ್ಗೊಂಡಿದ್ದರು.

About Mallikarjun

Check Also

ರಾಜಿಕ್ ಸಿಂಡ್ರೋಮ್ ನಿಂದ ಗೋವುಗಳ ಕರುಳಿನಲ್ಲಿ ರಕ್ತಸ್ರಾವ: ತಕ್ಷಣಕ್ರಮಕೈಗೊಳ್ಳುವಂತೆ ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಒತ್ತಾಯ

Intestinal bleeding in cows due to Rajik syndrome: VAPS urges Akshaya Foundation Trust Punyakoti Goshala …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.