ಕಲ್ಯಾಣಸಿರಿ ವಿಶೇಷ

ಸ್ವಚ್ಛತಾ ಅಭಿಯಾನದ ಜಾಗೃತಿ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

The Minister launched an awareness program for the Cleanliness Campaign


ಸ್ವಚ್ಛತಾ ಕಾಪಾಡಿಕೊಳ್ಳುವಲ್ಲಿ ಸಾರ್ವನಿಕರ ಸಹಕಾರ ಅಗತ್ಯ: ಸಚಿವ ಎನ್.ಎಸ್.ಬೋಸರಾಜು


ರಾಯಚೂರು,ಸೆ.೧೯,):- ನಗರದ ಸ್ವಚ್ಚತಾ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಜಾಗೃತಿ ಅವಶ್ಯಕತೆವಿದ್ದು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಸಾರ್ವನಿಕರ ಸಹಕಾರ ಮಾಡಿದ್ದಲ್ಲಿ ಸ್ವಚ್ಛತಾ ನಗರವನ್ನಾಗಿ ಮಾಡಲು ಸಾಧ್ಯವೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು.
ಅವರು ಸೆ.೧೯ರ ಗುರುವಾರ ದಂದು ನಗರದ ನೇತಾಜಿ ನಗರದ ಶೆಟ್ಟಿಭಾವಿ ವೃತ್ತದಿಂದ ಸೂಪರ್ ಮಾರ್ಕೇಟವರೆಗೆ ಜಿಲ್ಲಾಡಳಿತ ಹಾಗೂ ನಗರಸಭೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಅಭಿಯಾನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.


ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಯಾವ ರೀತಿ ಸ್ವಚ್ಛತೆ ಕಾಪಾಡಿ ಕೊಳ್ಳುತ್ತೇವೆ. ಅದೇ ರೀತಿಯಲ್ಲಿ ಸ್ವಚ್ಛತಾ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೇವಲ ಆಡಳಿತ ಮಂಡಳಿಯಿAದ ಸಾದ್ಯವಿಲ್ಲ. ಇದರ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕಳೆದ ಒಂದು ವರ್ಷದಿಂದ ಪೌರಕಾರ್ಮಿಕರನ್ನು ಒಗ್ಗೂಡಿಸಿ ವಾರ್ಡ್ ವಾರು ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗಿತ್ತು. ಎರಡು ಮೂರು ದಿನ ಬಳಿಕ ಮತ್ತೆ ಅದೇ ವಾರ್ಡ್ ನಲ್ಲಿ ಕಸ ಶೇಖರಣೆ ಆಗುತ್ತಿದೆ. ಇದರಿಂದ ನಾವು ಎಷ್ಟೆ ಸ್ವಚ್ಛತಾ ಕೆಲಸ ಮಾಡಿದರೂ ಮತ್ತೆ ಕಸ ಬರುತ್ತಿದ್ದು ಇದಕ್ಕೆ ಜಾಗೃತಿ ಕೊರತೆ ಇದೆ. ಪ್ರತಿ ಮನೆಯಿಂದಲೂ ಕಸವನ್ನು ಸಮರ್ಪಕ ವೀಲೆವಾರಿ ಆಗಬೇಕಿದೆ. ಜೊತೆಗೆ ನಗರದಲ್ಲಿನ ವ್ಯಾಪಾರಸ್ಥರು, ಅಂಗಡಿಗಳು, ಆಸ್ಪತ್ರೆ ಸೇರಿದಂತೆ ಎಲ್ಲಾ ಕಡೆಯಿಂದ ಕಸ ಶೇಖರಣೆ ಮಾಡಿ ವೀಲೆವಾರಿ ಮಾಡಲು ಕೊ-ಆರ್ಡಿನೇಷನ್ ಮಾಡಿಕೊಂಡು ಕೆಲಸ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಿಲ್ಲೆದ್ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು, ಈಶ್ವರಿ ವಿಶ್ವ ವಿದ್ಯಾಲಯದ ಸಂಚಾಲಕಿ ಸ್ಮಿತಾ ಅಕ್ಕನವರು, ನಗರಸಭೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಸಾಜೀದ್ ಸಮೀರ್, ನಗರಸಭೆ ಹಿರಿಯ ಸದಸ್ಯ ಜಯಣ್ಣ, ಮಹಮದ್ ಶಾಲಂ, ಮೌಲಾನ ಮೌಲಿ, ಸೈಯದ್ ಚಾಂದ್ ವೀರ ಹುಸೇನ್, ಸೈಯದ್ ಅಲಿ, ಜಿಂದಪ್ಪ, ಬಸವರಾಜ ದರೂರು, ಅನಿತಾ ತಿಮ್ಮಾರೆಡ್ಡಿ, ಹೇಮಲತಾ ಬೂದೆಪ್ಪ, ಬಿ.ರಮೇಶ, ತಿಮ್ಮರೆಡ್ಡಿ, ಹರಿಬಾಬು, ತಿಮ್ಮಪ್ಪ ನಾಯಕ, ನರಸರೆಡ್ಡಿ, ಭೀಮರಾಯ, ಸೇರಿದಂತೆ ಇತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago