ಕಲ್ಯಾಣಸಿರಿ ವಿಶೇಷ

ಕಾಡಂಚಿನ ಗ್ರಾಮಗಳನ್ನು ನಾವು ತೊರೆಯುವುದಿಲ್ಲ :ರಾಜ್ಯ ರೈತ ಸಂಘ ಸರ್ಕಾರಕ್ಕೆ ಎಚ್ಚರಿಕೆ .

We will not leave forested villages: State farmers’ association warns the governmen


ವರದಿ : ಬಂಗಾರಪ್ಪ .ಸಿ

ಹನೂರು : ಇತ್ತಿಚಿನ ದಿನಗಳಲ್ಲಿ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಮುನ್ನಾರ ಮಾಡುತ್ತಿದೆ‌, ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಹನೂರು ತಾಲೂಕಿನ ಗಡಿ ಗ್ರಾಮವಾದ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಡಿ ಹು ಪುದುಕಾಡು ಅಪ್ಪು ಕಾ ಪಟ್ಟಿ ಪುಂಗಂ ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಪಾಲಕ ಉದ್ಘಾಟನೆ ಮಾಡಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು
ಬಂಡವಾಳ ಶಾಹಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿ ಒಂದು ಲಕ್ಷ ಎಕರೆ ಭೂಮಿಯನ್ನು ಖನಿಜ ಸಂಪತ್ತು ತೆಗೆಯಲು ಪ್ರತ್ಯಕ್ಕ ಕಾಯಿದೆ ಕಾನೂನು ತಂದು ಅವಕಾಶ ಕಲ್ಪಿಸಿದೆ ಜೊತೆಗೆ ಸಂಡೂರು ಗ್ರಾಮದ ಜಿಂದಾಲ್ ಕಂಪನಿಗೆ ರೂ.3676 ಎಕರೆ ಜಮೀನು ಸಹ ಕಾಯ್ದೆ ಬದಲಾವಣೆ ಮಾಡಿ ಸರ್ಕಾರ ಬಂಡವಾಳ ಶಾಹಿಗಳಿಗೆ ಅವಕಾಶ ಕಲ್ಪಿಸಿದೆ ಕಾಡಂಚಿನ ಗ್ರಾಮಗಳ ನೂರಾರು ವರ್ಷಗಳಿಂದ ತಲತಲಾಂತರದಿಂದ ವಾಸ ಮಾಡುವ ಬಡ ರೈತ ಕುಟುಂಬಗಳಿಗೆ ಅರಣ್ಯದಂಚಿನ ಗ್ರಾಮಗಳನ್ನು ಒಕ್ಕಲಿಪಿಸಲು ಅರಣ್ಯ ಇಲಾಖೆ ಕಾಯ್ದೆ ಉಪಯೋಗಿಸಿ ಈಗಾಗಲೇ ಈ ಭಾಗದ ಎರಡು ನೋಟಿಸ್ ಅನ್ನು ಜಾರಿಗೊಳಿಸಿ ಬಡ ಮುಗ್ಧ ರೈತ ಕುಟುಂಬದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದುರ್ನಡತೆಯಿಂದ ದಬ್ಬಾಳಿಕೆಯಿಂದ ಏನೋ ತಿಳಿಯದ ಮುಗ್ಧ ಜನರನ್ನು ಒಕ್ಕಲಿ ಎಬ್ಬಿಸಲು ಮುನ್ನಾರ ಮಾಡುತ್ತಿದೆ ಹೀಗಾಗಿ ರಾಜ್ಯ ರೈತ ಸಂಘ ಹನೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಈಗಾಗಲೇ ರೂಪ ರೇಷ್ಮೆಗಳನ್ನು ಪಟ್ಟಿ ಮಾಡಿದೆ ಅರಣ್ಯ ಇಲಾಖೆ ಇಲ್ಲಿನ ಬಡ ಕುಟುಂಬಗಳನ್ನು ಮುಂದುವರೆದರೆ ರಾಜ್ಯ ಸಂಘ ಇಡೀ ಕರ್ನಾಟಕ ರಾಜ್ಯದ್ಯಂತ ಇದರ ಬಗ್ಗೆ ಹೋರಾಟ ಸಮಿತಿ ವತಿಯಿಂದ ಮಾಡಲಾಗುತ್ತದೆ ಹೀಗಾಗಿ ಇಲ್ಲಿನ ಶಾಸಕರು ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಇಲ್ಲಿನ ಕಾಡಂಚಿನ ಗಡಿ ಗ್ರಾಮದಲ್ಲಿರುವ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು….

ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಸ್ವಾತಂತ್ರ್ಯ ಪೂರ್ವಕಾಲದಿಂದಲೂ ಇಲ್ಲಿನ ಜನತೆ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ ಅರಣ್ಯ ಇಲಾಖೆ ವಲಯಗಳನ್ನು ರೂಪಿಸಿಕೊಂಡು ಬಡ ಜನತೆಯನ್ನು ಒಕ್ಕಲಿಬ್ಬಿಸಲು ಕಾನೂನು ರೂಪಿಸುತ್ತಿದೆ ಬಂಡವಾಳ ಶಾಹಿಗಳಿಗೆ ಕಾನೂನನ್ನು ಬದಲಾವಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಬಡ ಜನತೆ ಮೇಲೆ ಅರಣ್ಯ ಇಲಾಖೆ ಮುಖಾಂತರ ಮಾಡುತ್ತಿರುವ ದುರ್ನಡತೆ ಕಿರುಕುಳ ಸಹಿಸುವುದಿಲ್ಲ ಮುಂದೆ ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಜನತೆಯನ್ನು ಒಕ್ಕಲಿಬ್ಬಿಸಲು ಮುಂದಾದರೆ ಜಿಲ್ಲಾಧ್ಯಂತ ಇರುವ ಸಂಘಟನೆ ಇದನ್ನು ಖಂಡಿಸಿ ಹೋರಾಟದ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ…

ಉಪಾಧ್ಯಕ್ಷ ಗೌಡೆ ಗೌಡ : ಮಾತನಾಡಿ ತಾಲೂಕಿನಲ್ಲಿ ಅರಣ್ಯ ಪ್ರದೇಶದಿಂದ ಕೂಡಿರುವ ಬಹುತೇಕ ಗ್ರಾಮಗಳು ಅರಣ್ಯದಂಚಿನಲ್ಲೇ ಇರುವುದರಿಂದ ರೈತರು ಇಲ್ಲಿನ ಜನಸಾಮಾನ್ಯರು ಕಾಡುಪ್ರಾಣಿಗಳ ಹಾವಳಿಯಿಂದ ಈಗಾಗಲೇ ತತ್ತರಿಸಿದ್ದಾರೆ ಜೊತೆಗೆ ಅರಣ್ಯ ಇಲಾಖೆ ಸಹ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಜನಸಾಮಾನ್ಯರ ಮೇಲೆ ಮಾಡುತ್ತಿರುವ ದಬ್ಬಾಳಿಕೆ ಸಂಘಟನೆ ಸಹಿಸುವುದಿಲ್ಲ ಹೋರಾಟದ ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ಷ ಶೈಲೆಂದರ್ ಹನೂರು ತಾಲೂಕು ಘಟಕ ಅಧ್ಯಕ್ಷ ಅಮ್ಜದ್ ಖಾನ್ ಗುಂಡ್ಲುಪೇಟೆ ಯುವ ಘಟಕದ ಅಧ್ಯಕ್ಷ ಭರತ್ ಹನೂರು ತಾಲೂಕು ಗೌರವಾಧ್ಯಕ್ಷ ರಾಜಣ್ಣ ಮತ್ತು ಇನ್ನಿತರ ರೈತ ಮುಖಂಡರಾದ ಪಳನಿ ಸ್ವಾಮಿ ವಸಂತ ವೇಲು ಸ್ವಾಮಿ ಸೂರ್ಯ ರತ್ನವೇಲು ತಂಗವೇಲು ಸೇರಿದಂತೆ ಇನ್ನಿತರ ರೈತ ಮುಖಂಡರು ಉಪಸ್ಥಿತರಿದ್ದರು…

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago